ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ರೈತರನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
‘ಇಂದುಸಂಸತ್ತಿನಲ್ಲಿ ಸೂರ್ಯೋದಯವು ಅನ್ನದಾತರಹೆಸರಿನಲ್ಲಿ ಆಗಬೇಕು‘ ಎಂದು ರಾಹುಲ್ ತಿಳಿಸಿದ್ದಾರೆ. ಟ್ವೀಟ್ ಜೊತೆಗೆ#MSP ಮತ್ತು #FarmLaws ಎಂಬ ಹ್ಯಾಶ್ಟ್ಯಾಗ್ಗಳನ್ನು ಬಳಸಿದ್ದಾರೆ.
17ನೇ ಲೋಕಸಭೆಯ ಏಳನೇ ಅಧಿವೇಶನವು ಇಂದಿನಿಂದ ನಡೆಯಲಿದ್ದು, ಇದು ರಾಜಕೀಯವಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವ ಮಸೂದೆಯನ್ನು ಸಂಸತ್ತಿನಲ್ಲಿ ಮಂಡನೆ ಮಾಡುವ ಕುರಿತು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಈ ಬಗ್ಗೆ ವ್ಯಾಪಕ ಚರ್ಚೆ ನಡೆಯಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿವೆ.
आज संसद में अन्नदाता के नाम का सूरज उगाना है।#MSP#FarmLaws