<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದು, ಪ್ರೀತಿ ಮತ್ತು ಯಶಸ್ಸನ್ನು ಹಾರೈಸಿದ್ದಾರೆ.</p>.<p>ಕಾಂಗ್ರೆಸ್ ಜೋಡೊ ಯಾತ್ರೆಯ ತುಣುಕನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿರುವ ರಾಹುಲ್, ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.</p>.<p>2023ರಲ್ಲಿ ಪ್ರತಿ ಬೀದಿ, ಪ್ರತಿ ಹಳ್ಳಿ, ಪ್ರತಿ ನಗರದಲ್ಲಿ ಪ್ರೀತಿಯನ್ನು ಹಂಚುವ ಅಂಗಡಿ ತೆರೆಯಲಿದೆ ಎಂದು ಆಶಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.</p>.<p>ಇದನ್ನೂ ಓದಿ: <a href="https://www.prajavani.net/india-news/no-problem-with-cong-pushing-for-rahul-as-pm-candidate-nitish-1002011.html" itemprop="url">ರಾಹುಲ್ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದರೆ ನನಗ್ಯಾವ ಸಮಸ್ಯೆಯೂ ಇಲ್ಲ: ನಿತೀಶ್ </a></p>.<p>2022 ಸೆಪ್ಟೆಂಬರ್ನಲ್ಲಿ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆ ಈ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ.</p>.<p>ಈ ಹಿಂದೆ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಭಾರತ್ ಜೋಡೊ ಯಾತ್ರೆ ಮೂಲಕ ದೇಶವನ್ನು ಒಗ್ಗೂಡಿಸುವ ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದು, ಪ್ರೀತಿ ಮತ್ತು ಯಶಸ್ಸನ್ನು ಹಾರೈಸಿದ್ದಾರೆ.</p>.<p>ಕಾಂಗ್ರೆಸ್ ಜೋಡೊ ಯಾತ್ರೆಯ ತುಣುಕನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿರುವ ರಾಹುಲ್, ಬಿಜೆಪಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.</p>.<p>2023ರಲ್ಲಿ ಪ್ರತಿ ಬೀದಿ, ಪ್ರತಿ ಹಳ್ಳಿ, ಪ್ರತಿ ನಗರದಲ್ಲಿ ಪ್ರೀತಿಯನ್ನು ಹಂಚುವ ಅಂಗಡಿ ತೆರೆಯಲಿದೆ ಎಂದು ಆಶಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.</p>.<p>ಇದನ್ನೂ ಓದಿ: <a href="https://www.prajavani.net/india-news/no-problem-with-cong-pushing-for-rahul-as-pm-candidate-nitish-1002011.html" itemprop="url">ರಾಹುಲ್ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದರೆ ನನಗ್ಯಾವ ಸಮಸ್ಯೆಯೂ ಇಲ್ಲ: ನಿತೀಶ್ </a></p>.<p>2022 ಸೆಪ್ಟೆಂಬರ್ನಲ್ಲಿ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆ ಈ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ.</p>.<p>ಈ ಹಿಂದೆ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಭಾರತ್ ಜೋಡೊ ಯಾತ್ರೆ ಮೂಲಕ ದೇಶವನ್ನು ಒಗ್ಗೂಡಿಸುವ ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>