ಅಮೆರಿಕದ ಕಾರ್ನೆಲ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಭಾರತದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಕೌಶಿಕ್ ಬಸು ಅವರೊಂದಿಗಿನ ಸಂವಾದದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು 'ತಪ್ಪು ನಿರ್ಣಯ' ಎಂದಿದ್ದರು. ಕಾಂಗ್ರೆಸ್ ಯಾವುದೇ ಹಂತದಲ್ಲಿ ದೇಶದ ಸಾಂವಿಧಾನಿಕ ಚೌಕಟ್ಟನ್ನು ವಶಪಡಿಸಲು ಪ್ರಯತ್ನಿಸಲಿಲ್ಲ. ಅಂದಿನ ತುರ್ತು ಪರಿಸ್ಥಿತಿ ಹಾಗೂ ಈಗ ದೇಶದಲ್ಲಿ ನಡೆಯುತ್ತಿರುವ ಸನ್ನಿವೇಶಗಳು ಮೂಲಭೂತವಾಗಿ ವಿಭಿನ್ನವಾಗಿವೆ ಎಂದಿದ್ದರು. ಜತೆಗೆ, ಆರ್ಎಸ್ಎಸ್ ಅನ್ನು ಟೀಕಿಸಿದ್ದರು.