ಈ ಯೋಜನೆಗೆ ಕೇರಳ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಈ ರೈಲು ಮಾರ್ಗ ಹಾದು ಹೋಗಲಿದೆ. ಹೀಗಾಗಿ, ಕರ್ನಾಟಕ ಸರ್ಕಾರ ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ. ’₹3,384 ಕೋಟಿ ಮೊತ್ತದ ಈ ಮಾರ್ಗ 22 ಕಿ.ಮೀ. ದೂರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ಹಾಯ್ದು ಹೋಗುತ್ತದೆ. ಪರಿಸರ ಹಾಗೂ ಆರ್ಥಿಕ ದೃಷ್ಟಿಯಿಂದ ಇದು ಕಾರ್ಯಸಾಧುವಾದ ಯೋಜನೆ ಅಲ್ಲ’ ಎಂಬುದು ಕರ್ನಾಟಕದ ವನ್ಯಜೀವಿ ತಜ್ಞರ ಅಭಿಮತ.