<p>ಕೊಚ್ಚಿ: ಇಂಧನ ಬೆಲೆ ಏರಿಕೆ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ, ಸರ್ಕಾರವನ್ನು ನಡೆಸಿಕೊಳ್ಳುವುದಕ್ಕಾಗಿ ಜನ ಸಮಾನ್ಯರ ಜೇಬಿನಿಂದ ಹಣವನ್ನು ಬಲವಂತವಾಗಿ ದೋಚಲಾಗುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>ಸೇಂಟ್ತೆರೇಸಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಗಳೊಂದಿಗೆ ಸಂವಾದ ನಡೆಸಿದ ರಾಹುಲ್ ಗಾಂಧಿ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿರುವ ಹೊರತಾಗಿಯೂ ಇಂಧನ ಬೆಲೆ ಏರಿಕೆಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.</p>.<p>ದೇಶದ ಆರ್ಥಿಕತೆ ಕುಸಿತದಲ್ಲಿ ಸರ್ಕಾರದ ಕೆಟ್ಟ ಆಡಳಿತವನ್ನು ದೂಷಿಸಿದರು. ಪರಿಸ್ಥಿತಿ ಎಷ್ಟು ಹದೆಗೆಟ್ಟಿದೆಯೆಂದರೆ ಈ ಸಮಸ್ಯೆ ಮತ್ತಷ್ಟು ಕಾಲ ಮುಂದುವರಿಯಲಿದೆ ಎಂದು ಹೇಳಿದರು.</p>.<p>ಈ ಬಿಕ್ಕಟ್ಟಿನಿಂದ ಹೊರಬರಲು ಜನರ ಕೈಗೆ ಹಣವನ್ನು ಹಂಚಬೇಕಿದೆ. ಆದರೆ ಸರ್ಕಾರ ಅದನ್ನು ಆಲಿಸುತ್ತಿಲ್ಲ ಎಂದು ಆರೋಪಿಸಿದರು.</p>.<p>ನೋಟುಗಳ ಅಮಾನ್ಯೀಕರಣ, ಜಿಎಸ್ಟಿಯಿಂದಾಗಿ ಆರ್ಥಿಕತೆಯು ಹಾನಿಗೊಳಗಾಯಿತು. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಆಗಲೇ ದುರ್ಬಲವಾಗಿದ್ದ ಆರ್ಥಿಕತೆಯು ಸಂಪೂರ್ಣವಾಗಿ ಕುಸಿಯಿತು ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/only-aim-of-congress-is-politics-of-opportunism-says-jp-nadda-815535.html" itemprop="url">ಅವಕಾಶವಾದದ ರಾಜಕೀಯ ಕಾಂಗ್ರೆಸ್ಸಿನ ಏಕೈಕ ಗುರಿ: ಜೆ.ಪಿ. ನಡ್ಡಾ </a></p>.<p>ಆರ್ಥಿಕತೆಯು ನಿಂತಿರುವ ಕಾರಣ ಸರ್ಕಾರದ ಬಳಿಯೀಗ ಹಣವಿಲ್ಲ. ಅವರಿಗೆ ತೆರಿಗೆಯಿಂದ ಹಣ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸರ್ಕಾರವನ್ನು ನಡೆಸಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಬಲವಂತವಾಗಿಜನರ ಜೇಬಿನಿಂದ ಹಣವನ್ನು ದೋಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ಆರ್ಥಿಕತೆಯು ಸರಾಗವಾಗಿ ಸಾಗಲು ಸಾಮರಸ್ಯದ ವಾತಾವರಣ ಅತ್ಯಗತ್ಯ ಎಂದವರು ಪ್ರತಿಪಾದಿಸಿದರು. ಸಾಮರಸ್ಯ, ಶಾಂತಿ, ಮತ್ತು ಯೋಜನೆ ಬೇಕು. ಅಲ್ಲಿಯೇ ಸಮಸ್ಯೆ ಎದುರಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಚ್ಚಿ: ಇಂಧನ ಬೆಲೆ ಏರಿಕೆ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ, ಸರ್ಕಾರವನ್ನು ನಡೆಸಿಕೊಳ್ಳುವುದಕ್ಕಾಗಿ ಜನ ಸಮಾನ್ಯರ ಜೇಬಿನಿಂದ ಹಣವನ್ನು ಬಲವಂತವಾಗಿ ದೋಚಲಾಗುತ್ತಿದೆ ಎಂದು ಆರೋಪಿಸಿದ್ದಾರೆ.</p>.<p>ಸೇಂಟ್ತೆರೇಸಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಗಳೊಂದಿಗೆ ಸಂವಾದ ನಡೆಸಿದ ರಾಹುಲ್ ಗಾಂಧಿ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿರುವ ಹೊರತಾಗಿಯೂ ಇಂಧನ ಬೆಲೆ ಏರಿಕೆಮಾಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.</p>.<p>ದೇಶದ ಆರ್ಥಿಕತೆ ಕುಸಿತದಲ್ಲಿ ಸರ್ಕಾರದ ಕೆಟ್ಟ ಆಡಳಿತವನ್ನು ದೂಷಿಸಿದರು. ಪರಿಸ್ಥಿತಿ ಎಷ್ಟು ಹದೆಗೆಟ್ಟಿದೆಯೆಂದರೆ ಈ ಸಮಸ್ಯೆ ಮತ್ತಷ್ಟು ಕಾಲ ಮುಂದುವರಿಯಲಿದೆ ಎಂದು ಹೇಳಿದರು.</p>.<p>ಈ ಬಿಕ್ಕಟ್ಟಿನಿಂದ ಹೊರಬರಲು ಜನರ ಕೈಗೆ ಹಣವನ್ನು ಹಂಚಬೇಕಿದೆ. ಆದರೆ ಸರ್ಕಾರ ಅದನ್ನು ಆಲಿಸುತ್ತಿಲ್ಲ ಎಂದು ಆರೋಪಿಸಿದರು.</p>.<p>ನೋಟುಗಳ ಅಮಾನ್ಯೀಕರಣ, ಜಿಎಸ್ಟಿಯಿಂದಾಗಿ ಆರ್ಥಿಕತೆಯು ಹಾನಿಗೊಳಗಾಯಿತು. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಆಗಲೇ ದುರ್ಬಲವಾಗಿದ್ದ ಆರ್ಥಿಕತೆಯು ಸಂಪೂರ್ಣವಾಗಿ ಕುಸಿಯಿತು ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/only-aim-of-congress-is-politics-of-opportunism-says-jp-nadda-815535.html" itemprop="url">ಅವಕಾಶವಾದದ ರಾಜಕೀಯ ಕಾಂಗ್ರೆಸ್ಸಿನ ಏಕೈಕ ಗುರಿ: ಜೆ.ಪಿ. ನಡ್ಡಾ </a></p>.<p>ಆರ್ಥಿಕತೆಯು ನಿಂತಿರುವ ಕಾರಣ ಸರ್ಕಾರದ ಬಳಿಯೀಗ ಹಣವಿಲ್ಲ. ಅವರಿಗೆ ತೆರಿಗೆಯಿಂದ ಹಣ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸರ್ಕಾರವನ್ನು ನಡೆಸಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಬಲವಂತವಾಗಿಜನರ ಜೇಬಿನಿಂದ ಹಣವನ್ನು ದೋಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ಆರ್ಥಿಕತೆಯು ಸರಾಗವಾಗಿ ಸಾಗಲು ಸಾಮರಸ್ಯದ ವಾತಾವರಣ ಅತ್ಯಗತ್ಯ ಎಂದವರು ಪ್ರತಿಪಾದಿಸಿದರು. ಸಾಮರಸ್ಯ, ಶಾಂತಿ, ಮತ್ತು ಯೋಜನೆ ಬೇಕು. ಅಲ್ಲಿಯೇ ಸಮಸ್ಯೆ ಎದುರಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>