ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ನರ್ವೇಕರ್ ಮಹಾರಾಷ್ಟ್ರ ಸ್ಪೀಕರ್: ಶಿಂಧೆ–ಬಿಜೆಪಿ ದೋಸ್ತಿಗೆ ಮೊದಲ ಗೆಲುವು

ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್‌ ಆಗಿ ಬಿಜೆಪಿಯ ರಾಹುಲ್‌ ನರ್ವೇಕರ್‌ ಆಯ್ಕೆಯಾಗಿದ್ದು, ಸೋಮವಾರದ ವಿಶ್ವಾಸ ಮತಕ್ಕೂ ಮೊದಲು ಏಕನಾಥ ಶಿಂಧೆ–ಬಿಜೆಪಿ ದೋಸ್ತಿಗೆ ಮೊದಲ ಗೆಲುವು ಸಿಕ್ಕಂತಾಗಿದೆ.

ಬಿಜೆಪಿಯ ಅಭ್ಯರ್ಥಿ ರಾಹುಲ್‌ 164 ಮತಗಳನ್ನು ಪಡೆದು ಸ್ಪೀಕರ್‌ ಆಗಿ ಆಯ್ಕೆಯಾದರು. ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಶಿವಸೇನಾದ ಶಾಸಕ ರಾಜನ್‌ ಸಾಳ್ವಿ ಅವರನ್ನು ಸ್ಪೀಕರ್‌ ಚುನಾವಣೆ ಕಣಕ್ಕಿಳಿಸಿದ್ದವು. ಆದರೆ ಅವರು ಸೋಲುಂಡಿದ್ದಾರೆ.

ಗೋವಾದಲ್ಲಿ ತಂಗಿದ್ದ ಶಿವಸೇನಾದ ಶಾಸಕರು ಮತ್ತು ಪಕ್ಷೇತರ ಸದಸ್ಯರು ಸ್ಪೀಕರ್‌ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಮುಂಬೈಗೆ ಆಗಮಿಸಿದ್ದರು.

ಶಿವಸೇನಾದ ಬಂಡಾಯ ನಾಯಕ ಏಕನಾಥ ಶಿಂಧೆ ಅವರು ವಿಧಾನಸಭೆಯಲ್ಲಿ ಸೋಮವಾರ ಬಹುಮತ ಸಾಬೀತು ಮಾಡಬೇಕಾಗಿದೆ. ಅದಕ್ಕೂ ಮೊದಲೇ ಸಿಕ್ಕಿರುವ ಈ ಗೆಲುವು ದೋಸ್ತಿಗಳಲ್ಲಿ ವಿಶ್ವಾಸ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT