<p><strong>ನವದೆಹಲಿ</strong>: ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ‘ಸತ್ಯಾಗ್ರಹ‘ವನ್ನು ಬೆಂಬಲಿಸುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.</p>.<p>ರೈತರ ಪ್ರತಿಭಟನೆಗೆ ಬೆಂಬಲ ನೀಡುವ ಜತೆಗೆ ದೇಶದಲ್ಲಿ ಏರುತ್ತಿರುವ ತೈಲ ಬೆಲೆ ವಿರುದ್ಧವೂ ಹೋರಾಟ ನಡೆಸುವಂತೆ ರಾಹುಲ್ ಸಾರ್ವಜನಿಕರನ್ನು ಕೇಳಿದ್ದಾರೆ.</p>.<p>ತಮ್ಮ ಪಕ್ಷ ಆರಂಭಿಸಿರುವ ‘ಸ್ಪೀಕ್ಅಪ್ ಫಾರ್ ಕಿಸಾನ್ ಅಧಿಕಾರ್‘(#SpeakUpForKisanAdhikar) ಅಭಿಯಾನದಲ್ಲಿ ಭಾಗವಹಿಸಿರುವ ರಾಹುಲ್ ಗಾಂಧಿ, ‘ದೇಶದ ರೈತರು ತಮ್ಮ ಹಕ್ಕುಗಳನ್ನು ಗೆಲ್ಲುವುದಕ್ಕಾಗಿ ಸೊಕ್ಕಿನ ಮೋದಿ ಸರ್ಕಾರದ ವಿರುದ್ಧ ಸತ್ಯಾಗ್ರಹ ನಡೆಸುತ್ತಿದ್ದಾರೆ‘ ಎಂದು ಟ್ವೀಟ್ ಮಾಡಿದ್ದಾರೆ.</p>.<p>‘ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಇಡೀ ದೇಶ ಇಂದು ಧ್ವನಿ ಎತ್ತುತ್ತಿದೆ‘ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಸರ್ಕಾರದೊಂದಿಗೆ ನಡೆದ 9ನೇ ಸುತ್ತಿನ ಮಾತುಕತೆ ನಂತರ ಕಾಂಗ್ರೆಸ್ ಪಕ್ಷ ‘ಸ್ಪೀಕ್ಅಪ್ಫಾರ್ಕಿಸಾನ್ಅಧಿಕಾರ್‘ ಅಭಿಯಾನವನ್ನು ಆರಂಭಿಸಿದೆ.</p>.<p>ರೈತರು ನಡೆಸಲಿರುವ ಬೃಹತ್ ಪ್ರತಿಭಟನಾ ದಿನವನ್ನು ಕಾಂಗ್ರೆಸ್, ‘ಕಿಸಾನ್ ಅಧಿಕಾರಿ ದಿವಾಸ್‘ ಎಂದು ಗುರುತಿಸಿದೆ. ಅಂದು ಎಲ್ಲಾ ರಾಜ್ಯಗಳ ರಾಜಧಾನಿಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ‘ಸತ್ಯಾಗ್ರಹ‘ವನ್ನು ಬೆಂಬಲಿಸುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.</p>.<p>ರೈತರ ಪ್ರತಿಭಟನೆಗೆ ಬೆಂಬಲ ನೀಡುವ ಜತೆಗೆ ದೇಶದಲ್ಲಿ ಏರುತ್ತಿರುವ ತೈಲ ಬೆಲೆ ವಿರುದ್ಧವೂ ಹೋರಾಟ ನಡೆಸುವಂತೆ ರಾಹುಲ್ ಸಾರ್ವಜನಿಕರನ್ನು ಕೇಳಿದ್ದಾರೆ.</p>.<p>ತಮ್ಮ ಪಕ್ಷ ಆರಂಭಿಸಿರುವ ‘ಸ್ಪೀಕ್ಅಪ್ ಫಾರ್ ಕಿಸಾನ್ ಅಧಿಕಾರ್‘(#SpeakUpForKisanAdhikar) ಅಭಿಯಾನದಲ್ಲಿ ಭಾಗವಹಿಸಿರುವ ರಾಹುಲ್ ಗಾಂಧಿ, ‘ದೇಶದ ರೈತರು ತಮ್ಮ ಹಕ್ಕುಗಳನ್ನು ಗೆಲ್ಲುವುದಕ್ಕಾಗಿ ಸೊಕ್ಕಿನ ಮೋದಿ ಸರ್ಕಾರದ ವಿರುದ್ಧ ಸತ್ಯಾಗ್ರಹ ನಡೆಸುತ್ತಿದ್ದಾರೆ‘ ಎಂದು ಟ್ವೀಟ್ ಮಾಡಿದ್ದಾರೆ.</p>.<p>‘ರೈತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಇಡೀ ದೇಶ ಇಂದು ಧ್ವನಿ ಎತ್ತುತ್ತಿದೆ‘ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಸರ್ಕಾರದೊಂದಿಗೆ ನಡೆದ 9ನೇ ಸುತ್ತಿನ ಮಾತುಕತೆ ನಂತರ ಕಾಂಗ್ರೆಸ್ ಪಕ್ಷ ‘ಸ್ಪೀಕ್ಅಪ್ಫಾರ್ಕಿಸಾನ್ಅಧಿಕಾರ್‘ ಅಭಿಯಾನವನ್ನು ಆರಂಭಿಸಿದೆ.</p>.<p>ರೈತರು ನಡೆಸಲಿರುವ ಬೃಹತ್ ಪ್ರತಿಭಟನಾ ದಿನವನ್ನು ಕಾಂಗ್ರೆಸ್, ‘ಕಿಸಾನ್ ಅಧಿಕಾರಿ ದಿವಾಸ್‘ ಎಂದು ಗುರುತಿಸಿದೆ. ಅಂದು ಎಲ್ಲಾ ರಾಜ್ಯಗಳ ರಾಜಧಾನಿಯಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>