<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆಗಟ್ಟಲು ಜಾರಿಗೊಳಿಸಲಾಗಿರುವ ನಿರ್ಬಂಧಗಳು ಭಾನುವಾರ ಕೊನೆಗೊಳ್ಳುತ್ತಿರುವ ಕಾರಣ, ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ಅವರು ಸೋಮವಾರ (ನ.22) ಪರಿಶೀಲನಾ ಸಭೆ ನಡೆಸಲಿದ್ದಾರೆ.</p>.<p>‘ಈ ಉನ್ನತ ಮಟ್ಟದ ಸಭೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳುವರು’ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ದೆಹಲಿಯಲ್ಲಿ ವಾಯುಮಾಲಿನ್ಯ ತಡೆಗಟ್ಟುವ ಸಂಬಂಧ ಸರ್ಕಾರ ಕಳೆದ ಬುಧವಾರ ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸಿತ್ತು. ಅಗತ್ಯವಲ್ಲದ ವಸ್ತುಗಳನ್ನು ಸಾಗಿಸುವ ಟ್ರಕ್ಗಳು ದೆಹಲಿ ಪ್ರವೇಶಿಸುವುದರ ಮೇಲೆ ನಿಷೇಧ ಹೇರಲಾಗಿತ್ತು. ಮುಂದಿನ ಆದೇಶದ ವರೆಗೆ ಶಾಲಾ–ಕಾಲೇಜುಗಳನ್ನು ಬಂದ್ ಮಾಡಲು ಸೂಚಿಸಲಾಗಿತ್ತು.</p>.<p>ನ. 21ರ ವರೆಗೆ ಕಟ್ಟಡಗಳ ನಿರ್ಮಾಣ ಹಾಗೂ ನೆಲಸಮಗೊಳಿಸುವ ಚಟುವಟಿಕೆಗಳ ಮೇಲೆ ನಿಷೇಧ ಹೇರಲಾಗಿತ್ತು. ಭಾನುವಾರದವರೆಗೆ ನೌಕರರು ಮನೆಯಿಂದಲೇ ಕಚೇರಿ ಕೆಲಸ ಮಾಡುವಂತೆಯೂ ದೆಹಲಿ ಸರ್ಕಾರ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆಗಟ್ಟಲು ಜಾರಿಗೊಳಿಸಲಾಗಿರುವ ನಿರ್ಬಂಧಗಳು ಭಾನುವಾರ ಕೊನೆಗೊಳ್ಳುತ್ತಿರುವ ಕಾರಣ, ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ಅವರು ಸೋಮವಾರ (ನ.22) ಪರಿಶೀಲನಾ ಸಭೆ ನಡೆಸಲಿದ್ದಾರೆ.</p>.<p>‘ಈ ಉನ್ನತ ಮಟ್ಟದ ಸಭೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳುವರು’ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ದೆಹಲಿಯಲ್ಲಿ ವಾಯುಮಾಲಿನ್ಯ ತಡೆಗಟ್ಟುವ ಸಂಬಂಧ ಸರ್ಕಾರ ಕಳೆದ ಬುಧವಾರ ಹಲವಾರು ನಿರ್ಬಂಧಗಳನ್ನು ಜಾರಿಗೊಳಿಸಿತ್ತು. ಅಗತ್ಯವಲ್ಲದ ವಸ್ತುಗಳನ್ನು ಸಾಗಿಸುವ ಟ್ರಕ್ಗಳು ದೆಹಲಿ ಪ್ರವೇಶಿಸುವುದರ ಮೇಲೆ ನಿಷೇಧ ಹೇರಲಾಗಿತ್ತು. ಮುಂದಿನ ಆದೇಶದ ವರೆಗೆ ಶಾಲಾ–ಕಾಲೇಜುಗಳನ್ನು ಬಂದ್ ಮಾಡಲು ಸೂಚಿಸಲಾಗಿತ್ತು.</p>.<p>ನ. 21ರ ವರೆಗೆ ಕಟ್ಟಡಗಳ ನಿರ್ಮಾಣ ಹಾಗೂ ನೆಲಸಮಗೊಳಿಸುವ ಚಟುವಟಿಕೆಗಳ ಮೇಲೆ ನಿಷೇಧ ಹೇರಲಾಗಿತ್ತು. ಭಾನುವಾರದವರೆಗೆ ನೌಕರರು ಮನೆಯಿಂದಲೇ ಕಚೇರಿ ಕೆಲಸ ಮಾಡುವಂತೆಯೂ ದೆಹಲಿ ಸರ್ಕಾರ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>