ಇನ್ನೊಂದೆಡೆ, ಕೇಂದ್ರ ಸರ್ಕಾರ ಹೇರಿರುವ ನಿಷೇಧ ಕ್ರಮವನ್ನು ಜಾರಿಗೊಳಿಸುವ ಸಂಬಂಧ ಹಲವು ರಾಜ್ಯ ಸರ್ಕಾರಗಳು ಆದೇಶ ಹೊರಡಿಸಿವೆ. ಇದನ್ನು ಜಾರಿಗೊಳಿಸುವ ಅಧಿಕಾರಿಗಳು ಆಯಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನೀಡಲಾಗಿದೆ. ಅಲ್ಲದೆ, ಸಂಘಟನೆಗೆ ಸೇರಿದವರ ಚಲನವಲನಗಳ ಮೇಲೆ ಕಣ್ಗಾವಲು ಇಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.