<p><strong>ಪಣಜಿ: </strong>ಕೇಂದ್ರ ಸರ್ಕಾರ ಗೋವಾದಲ್ಲಿ ಅನುಷ್ಠಾನಗೊಳಿಸುತ್ತಿರುವ ರಸ್ತೆ, ರೈಲು ಅಭಿವೃದ್ದಿ ಹಾಗೂ ವಿದ್ಯುತ್ ಯೋಜನೆಗಳಿಂದಾಗಿ ನೆರೆಯ ಕರ್ನಾಟಕದ ಕಾಳಿ ಹುಲಿ ಸಂರಕ್ಷಿತಾರಣ್ಯಕ್ಕೆ ಧಕ್ಕೆ ಉಂಟಾಗಲಿದೆ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಈ ಯೋಜನೆಗಳ ಅನುಷ್ಠಾನದಿಂದ ಪರಿಸರ ಮತ್ತು ಹುಲಿಗಳ ಚಲನವಲನದ ಮೇಲಾಗಬಹುದಾದ ಪರಿಣಾಮ ಕುರಿತು 30 ಜನ ಪರಿಸರವಾದಿಗಳು ಅಧ್ಯಯನ ನಡೆಸಿದ್ದಾರೆ. ಈ ಅಧ್ಯಯನ ವರದಿಯನ್ನು ಸಂಶೋಧನೆ ಮತ್ತು ವಿಜ್ಞಾನ ಪ್ರಸಾರ ಕಾರ್ಯದಲ್ಲಿ ಸಂಘಟನೆಗಳು ಪ್ರಕಟಿಸಿವೆ.</p>.<p>ಬೆಂಗಳೂರು ಮೂಲದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್, ಅಜೀಂ ಪ್ರೇಮ್ಜಿ ಯೂನಿವರ್ಸಿಸಿ ಸೇರಿದಂತೆ ಕರ್ನಾಟಕದ 6 ಸಂಸ್ಥೆಗಳು ಈ ಅಧ್ಯಯನ ತಂಡದಲ್ಲಿವೆ.</p>.<p>ನೈರುತ್ಯ ರೈಲ್ವೆಯಿಂದ ಜೋಡಿ ರೈಲುಮಾರ್ಗ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ–4ರ ಅಭಿವೃದ್ಧಿ ಹಾಗೂ ಕರ್ನಾಟಕ–ಗೋವಾ ನಡುವೆ ವಿದ್ಯುತ್ ಮಾರ್ಗ ನಿರ್ಮಾಣ ಯೋಜನೆಗಳಿಂದಾಗುವ ಪರಿಣಾಮ ಕುರಿತು ಅಧ್ಯಯನ ನಡೆಸಲಾಗಿದೆ.</p>.<p>ಗೋವಾ ಗಡಿಗೆ ಹೊಂದಿಕೊಂಡಿರುವ ಅರಣ್ಯ, ಭೂಪ್ರದೇಶಗಳು ಇತರ ಅರಣ್ಯಗಳಿಗೆ ಸಂಪರ್ಕ ಕಲ್ಪಿಸುವ ಜೊತೆಗೆ ಕಾಳಿ ಹುಲಿ ಸಂರಕ್ಷಿತಾರಣ್ಯಕ್ಕೂ ಸಂಪರ್ಕ ಕಲ್ಪಿಸುತ್ತವೆ ಎಂದು ಅಧ್ಯಯನ ವರದಿಯಲ್ಲಿ ವಿವರಿಸಲಾಗಿದೆ.</p>.<p>ವಿದ್ಯುತ್ ಮಾರ್ಗ ನಿರ್ಮಾಣದಿಂದ ಗೋವಾದಲ್ಲಿ 43,456 ಮರಗಳು ಹಾಗೂ ಕರ್ನಾಟಕದಲ್ಲಿ 62,289 ಮರಗಳನ್ನು ಕಡಿಯಬೇಕಾಗುತ್ತದೆ. ಕಾಳಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯ 30,412 ಹೆಕ್ಟೇರ್ ಪ್ರದೇಶವು ಸಹ ಈ ಯೋಜನೆಗೆ ಬಳಕೆಯಾಗಲಿದೆ ಎಂದೂ ವಿವರಿಸಲಾಗಿದೆ.</p>.<p>ಜೋಡಿ ರೈಲು ಮಾರ್ಗ ನಿರ್ಮಾಣ ಯೋಜನೆಯಿಂದ ಗೋವಾದಲ್ಲಿನ ಭಗವಾನ್ ಮಹಾವೀರ ವನ್ಯಜೀವಿ ಧಾಮಕ್ಕೆ ಧಕ್ಕೆಯುಂಟಾಗುವುದು. ಪಶ್ಚಿಮ ಘಟ್ಟ ಪ್ರದೇಶಕ್ಕೂ ಹಾನಿ ತಪ್ಪಿದ್ದಲ್ಲ ಎಂಬ ಆತಂಕವನ್ನು ಪರಿಸರವಾದಿಗಳು ವ್ಯಕ್ತಪಡಿಸಿದ್ದಾರೆ.</p>.<p>ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿರುವ ಉಕ್ಕು ಕಾರ್ಖಾನೆಗಳಿಗೆ ಕಬ್ಬಿಣದ ಅದಿರು ಸಾಗಿಸಲು ಅನುಕೂಲವಾಗಲಿ ಎಂಬ ಕಾರಣಕ್ಕೆ ಈ ಯೋಜನೆಗಳನ್ನು ನಿರ್ಮಿಸಲಾಗುತ್ತಿದೆ ಎಂದೂ ಪರಿಸರವಾದಿಗಳು ಆರೋಪಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ: </strong>ಕೇಂದ್ರ ಸರ್ಕಾರ ಗೋವಾದಲ್ಲಿ ಅನುಷ್ಠಾನಗೊಳಿಸುತ್ತಿರುವ ರಸ್ತೆ, ರೈಲು ಅಭಿವೃದ್ದಿ ಹಾಗೂ ವಿದ್ಯುತ್ ಯೋಜನೆಗಳಿಂದಾಗಿ ನೆರೆಯ ಕರ್ನಾಟಕದ ಕಾಳಿ ಹುಲಿ ಸಂರಕ್ಷಿತಾರಣ್ಯಕ್ಕೆ ಧಕ್ಕೆ ಉಂಟಾಗಲಿದೆ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.</p>.<p>ಈ ಯೋಜನೆಗಳ ಅನುಷ್ಠಾನದಿಂದ ಪರಿಸರ ಮತ್ತು ಹುಲಿಗಳ ಚಲನವಲನದ ಮೇಲಾಗಬಹುದಾದ ಪರಿಣಾಮ ಕುರಿತು 30 ಜನ ಪರಿಸರವಾದಿಗಳು ಅಧ್ಯಯನ ನಡೆಸಿದ್ದಾರೆ. ಈ ಅಧ್ಯಯನ ವರದಿಯನ್ನು ಸಂಶೋಧನೆ ಮತ್ತು ವಿಜ್ಞಾನ ಪ್ರಸಾರ ಕಾರ್ಯದಲ್ಲಿ ಸಂಘಟನೆಗಳು ಪ್ರಕಟಿಸಿವೆ.</p>.<p>ಬೆಂಗಳೂರು ಮೂಲದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್, ಅಜೀಂ ಪ್ರೇಮ್ಜಿ ಯೂನಿವರ್ಸಿಸಿ ಸೇರಿದಂತೆ ಕರ್ನಾಟಕದ 6 ಸಂಸ್ಥೆಗಳು ಈ ಅಧ್ಯಯನ ತಂಡದಲ್ಲಿವೆ.</p>.<p>ನೈರುತ್ಯ ರೈಲ್ವೆಯಿಂದ ಜೋಡಿ ರೈಲುಮಾರ್ಗ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ–4ರ ಅಭಿವೃದ್ಧಿ ಹಾಗೂ ಕರ್ನಾಟಕ–ಗೋವಾ ನಡುವೆ ವಿದ್ಯುತ್ ಮಾರ್ಗ ನಿರ್ಮಾಣ ಯೋಜನೆಗಳಿಂದಾಗುವ ಪರಿಣಾಮ ಕುರಿತು ಅಧ್ಯಯನ ನಡೆಸಲಾಗಿದೆ.</p>.<p>ಗೋವಾ ಗಡಿಗೆ ಹೊಂದಿಕೊಂಡಿರುವ ಅರಣ್ಯ, ಭೂಪ್ರದೇಶಗಳು ಇತರ ಅರಣ್ಯಗಳಿಗೆ ಸಂಪರ್ಕ ಕಲ್ಪಿಸುವ ಜೊತೆಗೆ ಕಾಳಿ ಹುಲಿ ಸಂರಕ್ಷಿತಾರಣ್ಯಕ್ಕೂ ಸಂಪರ್ಕ ಕಲ್ಪಿಸುತ್ತವೆ ಎಂದು ಅಧ್ಯಯನ ವರದಿಯಲ್ಲಿ ವಿವರಿಸಲಾಗಿದೆ.</p>.<p>ವಿದ್ಯುತ್ ಮಾರ್ಗ ನಿರ್ಮಾಣದಿಂದ ಗೋವಾದಲ್ಲಿ 43,456 ಮರಗಳು ಹಾಗೂ ಕರ್ನಾಟಕದಲ್ಲಿ 62,289 ಮರಗಳನ್ನು ಕಡಿಯಬೇಕಾಗುತ್ತದೆ. ಕಾಳಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯ 30,412 ಹೆಕ್ಟೇರ್ ಪ್ರದೇಶವು ಸಹ ಈ ಯೋಜನೆಗೆ ಬಳಕೆಯಾಗಲಿದೆ ಎಂದೂ ವಿವರಿಸಲಾಗಿದೆ.</p>.<p>ಜೋಡಿ ರೈಲು ಮಾರ್ಗ ನಿರ್ಮಾಣ ಯೋಜನೆಯಿಂದ ಗೋವಾದಲ್ಲಿನ ಭಗವಾನ್ ಮಹಾವೀರ ವನ್ಯಜೀವಿ ಧಾಮಕ್ಕೆ ಧಕ್ಕೆಯುಂಟಾಗುವುದು. ಪಶ್ಚಿಮ ಘಟ್ಟ ಪ್ರದೇಶಕ್ಕೂ ಹಾನಿ ತಪ್ಪಿದ್ದಲ್ಲ ಎಂಬ ಆತಂಕವನ್ನು ಪರಿಸರವಾದಿಗಳು ವ್ಯಕ್ತಪಡಿಸಿದ್ದಾರೆ.</p>.<p>ಕರ್ನಾಟಕದ ಬಳ್ಳಾರಿ ಜಿಲ್ಲೆಯಲ್ಲಿರುವ ಉಕ್ಕು ಕಾರ್ಖಾನೆಗಳಿಗೆ ಕಬ್ಬಿಣದ ಅದಿರು ಸಾಗಿಸಲು ಅನುಕೂಲವಾಗಲಿ ಎಂಬ ಕಾರಣಕ್ಕೆ ಈ ಯೋಜನೆಗಳನ್ನು ನಿರ್ಮಿಸಲಾಗುತ್ತಿದೆ ಎಂದೂ ಪರಿಸರವಾದಿಗಳು ಆರೋಪಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>