ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ತಡೆದು ಪ್ರತಿಭಟನೆ; ದೆಹಲಿಯಾದ್ಯಂತ ಕಟ್ಟೆಚ್ಚರ

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ರೈತ ಸಂಘಟನೆಗಳ ಒತ್ತಾಯ
Last Updated 18 ಫೆಬ್ರುವರಿ 2021, 7:18 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ) ಗುರುವಾರ ದೇಶದಾದ್ಯಂತ ರೈಲು ತಡೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು, ರಾಷ್ಟ್ರ ರಾಜಧಾನಿಯ ವಿವಿಧ ಭಾಗಳಲ್ಲಿರುವ ರೈಲ್ವೆ ಹಳಿಗಳ ಬಳಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

ರೈಲು ನಿಲ್ದಾಣಮತ್ತು ರೈಲು ಹಳಿಗಳು ಹಾದು ಹೋಗಿರುವ ಪ್ರದೇಶಗಳಲ್ಲಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ರೈಲ್ ತಡೆ’ ಕರೆಯ ಹಿನ್ನೆಲೆಯಲ್ಲಿ ರೈಲ್ವೆ ಸಂರಕ್ಷಣಾ ವಿಶೇಷ ಪಡೆಯ 20ಕ್ಕೂ ಹೆಚ್ಚು ತುಕಡಿಗಳನ್ನು ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಲ್ಲಿನಿಯೋಜಿಸಲಾಗಿದೆ.

ಜನವರಿ 26ರ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ‘ಟ್ರ್ಯಾಕ್ಟರ್‌ ಪೆರೇಡ್‌‘ಗೆ ಎಸ್‌ಕೆಎಂ ಕರೆ ನೀಡಿತ್ತು. ಆ ವೇಳೆ ಪ್ರತಿಭಟನಾಕಾರರ ಒಂದು ಗುಂಪು ಪೊಲೀಸರೊಂದಿಗೆ ಘರ್ಷಣೆಗಿಳಿದು, ವಾಹನಗಳನ್ನು ಧ್ವಂಸಗೊಳಿಸಿ, ಕೆಂಪುಕೋಟೆ ಬಳಿ ಧಾರ್ಮಿಕ ಧ್ವಜನವನ್ನು ಹಾರಿಸಿತ್ತು. ನಂತರ ಎಸ್‌ಕೆಎಂ ಫೆ.6 ರಂದು ದೇಶದಾದ್ಯಂತ ‘ಚಕ್ಕಾ ಜಾಮ್‌‘ ಚಳವಳಿಗೆ ಕರೆ ನೀಡಿತ್ತು. ಈಗ ಅದರ ಮುಂದುವರಿದ ಭಾಗವಾಗಿ ‘ರೈಲು ತಡೆ‘ ಚಳವಳಿ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT