<p>ನ<strong>ವದೆಹಲಿ:</strong> ಕರ್ನಾಟಕ ರಾಜ್ಯದಲ್ಲಿ ರೈಲು ಮಾರ್ಗಗಳ ವಿದ್ಯುದೀಕರಣ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. </p>.<p>ರಾಜ್ಯದಲ್ಲಿ ರೈಲ್ವೆ ಇಲಾಖೆಯು 12 ಮಾರ್ಗಗಳ ವಿದ್ಯುದೀಕರಣ ಕಾಮಗಾರಿ ಕೈಗೆತ್ತಿಕೊಂಡಿದೆ. 2,533 ಕಿ.ಮೀ. ಮಾರ್ಗದ ಪೈಕಿ ಈ ವರೆಗೆ ಪೂರ್ಣ ಆಗಿರುವುದು 722 ಕಿ.ಮೀ. ಮಾತ್ರ. 12 ಮಾರ್ಗಗಳ ಕಾಮಗಾರಿ ಪೂರ್ಣಗೊಳಿಸಲು ₹3,887 ಕೋಟಿ ಬೇಕು. ಈವರೆಗೆ ಇಲಾಖೆ ₹1,207 ಕೋಟಿ ವೆಚ್ಚ ಮಾಡಿದೆ. </p>.<p>ದೇಶದ ರೈಲು ಮಾರ್ಗಗಳ ವಿದ್ಯುದೀಕರಣ ಕಾಮಗಾರಿಗಳ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದು, ಕರ್ನಾಟಕ (12), ರಾಜಸ್ಥಾನ (12) ಹಾಗೂ ಗುಜರಾತ್ನಲ್ಲಿ (11) ಹೆಚ್ಚಿನ ಸಂಖ್ಯೆಯ ಕಾಮಗಾರಿಗಳು ಬಾಕಿ ಇವೆ ಎಂದು ಮಾಹಿತಿ ನೀಡಿದ್ದಾರೆ. </p>.<p>‘ಕರ್ನಾಟಕದಲ್ಲಿ ₹49,087 ಕೋಟಿ ವೆಚ್ಚದ 4,330 ಕಿ.ಮೀ. ರೈಲ್ವೆ ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಇದರಲ್ಲಿ 21 ಹೊಸ ಯೋಜನೆಗಳು ಹಾಗೂ 11 ದ್ವಿಪಥ ಕಾಮಗಾರಿಗಳು ಸೇರಿವೆ. ₹16,258 ಕೋಟಿ ವೆಚ್ಚದ 1,305 ಕಿ.ಮೀ. ಕಾಮಗಾರಿಗಳು ಪೂರ್ಣಗೊಂಡಿವೆ’ ಎಂದಿದ್ದಾರೆ. </p>.<p>‘ಕರ್ನಾಟಕದಲ್ಲಿ ಹೊಸ ಮಾರ್ಗಗಳ ನಿರ್ಮಾಣ, ದ್ವಿಪಥ, ಗೇಜ್ ಪರಿವರ್ತನೆ, ವಿದ್ಯುದೀಕರಣ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಒದಗಿಸುತ್ತಿರುವ ಹಣ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. 2014–19ನೇ ಸಾಲಿನಲ್ಲಿ ಪ್ರತಿವರ್ಷ ₹2,702 ಕೋಟಿ ಒದಗಿಸಲಾಗಿದೆ. 2019–20ರಲ್ಲಿ ₹3,386 ಕೋಟಿ, 2020–21ರಲ್ಲಿ ₹4,220 ಕೋಟಿ, 2021–22ರಲ್ಲಿ ₹4,227, 2022–23ರಲ್ಲಿ ₹6,091 ಕೋಟಿ ಒದಗಿಸಲಾಗಿದೆ. ಈ ವರ್ಷದ ಬಜೆಟ್ನಲ್ಲಿ ₹7,561 ಕೋಟಿ ನೀಡಲಾಗಿದೆ. ಇದು 2009-14ರ ಅವಧಿಯಲ್ಲಿ ಒದಗಿಸಿರುವ ಅನುದಾನಕ್ಕೆ ಹೋಲಿಸಿದರೆ ಶೇ 806 ಪಟ್ಟು ಅಧಿಕ’ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<p>‘ಇತ್ತೀಚಿನ ವರ್ಷಗಳಲ್ಲಿ ರೈಲ್ವೆ ವಿದ್ಯುದೀಕರಣ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಒದಗಿಸಿರಲಿಲ್ಲ. ಮಾರ್ಗಗಳ ವಿದ್ಯುದೀಕರಣ ಕಾಮಗಾರಿಯಲ್ಲಿ ಕರ್ನಾಟಕ ಹಿಂದೆ ಇತ್ತು. ಈ ಸಲದ ಬಜೆಟ್ನಲ್ಲಿ ಹೊಸ ಯೋಜನೆಗಳ ಜತೆಗೆ ದ್ವಿಪಥ ಹಾಗೂ ವಿದ್ಯುದೀಕರಣ ಕಾಮಗಾರಿಗೆ ಹೆಚ್ಚಿನ ಅನುದಾನ ಒದಗಿಸಿದ್ದಾರೆ. ಈ ಅನುದಾನವನ್ನು ಬಳಸಿಕೊಂಡು 2024ರ ಒಳಗೆ ಈ ಕಾಮಗಾರಿಗಳನ್ನು ಪೂರ್ಣಗೊಳಿಸಬಹುದು’ ಎಂದು ರೈಲ್ವೆ ಹೋರಾಟಗಾರ ಕೃಷ್ಣಪ್ರಸಾದ್ ತಿಳಿಸಿದರು. </p>.<p>‘ಈ ವರ್ಷದ ಕೇಂದ್ರ ಬಜೆಟ್ನಲ್ಲಿ ರಾಜ್ಯದ 9 ರೈಲು ಮಾರ್ಗಗಳ ವಿದ್ಯುದೀಕರಣಕ್ಕೆ ₹725 ಕೋಟಿ ಒದಗಿಸಲಾಗಿದೆ. ಇದರಿಂದಾಗಿ, ವಿದ್ಯುದೀಕರಣ ಕಾಮಗಾರಿಗೆ ಇನ್ನಷ್ಟು ವೇಗ ಸಿಗಲಿದೆ’ ಎಂದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನ<strong>ವದೆಹಲಿ:</strong> ಕರ್ನಾಟಕ ರಾಜ್ಯದಲ್ಲಿ ರೈಲು ಮಾರ್ಗಗಳ ವಿದ್ಯುದೀಕರಣ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. </p>.<p>ರಾಜ್ಯದಲ್ಲಿ ರೈಲ್ವೆ ಇಲಾಖೆಯು 12 ಮಾರ್ಗಗಳ ವಿದ್ಯುದೀಕರಣ ಕಾಮಗಾರಿ ಕೈಗೆತ್ತಿಕೊಂಡಿದೆ. 2,533 ಕಿ.ಮೀ. ಮಾರ್ಗದ ಪೈಕಿ ಈ ವರೆಗೆ ಪೂರ್ಣ ಆಗಿರುವುದು 722 ಕಿ.ಮೀ. ಮಾತ್ರ. 12 ಮಾರ್ಗಗಳ ಕಾಮಗಾರಿ ಪೂರ್ಣಗೊಳಿಸಲು ₹3,887 ಕೋಟಿ ಬೇಕು. ಈವರೆಗೆ ಇಲಾಖೆ ₹1,207 ಕೋಟಿ ವೆಚ್ಚ ಮಾಡಿದೆ. </p>.<p>ದೇಶದ ರೈಲು ಮಾರ್ಗಗಳ ವಿದ್ಯುದೀಕರಣ ಕಾಮಗಾರಿಗಳ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದು, ಕರ್ನಾಟಕ (12), ರಾಜಸ್ಥಾನ (12) ಹಾಗೂ ಗುಜರಾತ್ನಲ್ಲಿ (11) ಹೆಚ್ಚಿನ ಸಂಖ್ಯೆಯ ಕಾಮಗಾರಿಗಳು ಬಾಕಿ ಇವೆ ಎಂದು ಮಾಹಿತಿ ನೀಡಿದ್ದಾರೆ. </p>.<p>‘ಕರ್ನಾಟಕದಲ್ಲಿ ₹49,087 ಕೋಟಿ ವೆಚ್ಚದ 4,330 ಕಿ.ಮೀ. ರೈಲ್ವೆ ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಇದರಲ್ಲಿ 21 ಹೊಸ ಯೋಜನೆಗಳು ಹಾಗೂ 11 ದ್ವಿಪಥ ಕಾಮಗಾರಿಗಳು ಸೇರಿವೆ. ₹16,258 ಕೋಟಿ ವೆಚ್ಚದ 1,305 ಕಿ.ಮೀ. ಕಾಮಗಾರಿಗಳು ಪೂರ್ಣಗೊಂಡಿವೆ’ ಎಂದಿದ್ದಾರೆ. </p>.<p>‘ಕರ್ನಾಟಕದಲ್ಲಿ ಹೊಸ ಮಾರ್ಗಗಳ ನಿರ್ಮಾಣ, ದ್ವಿಪಥ, ಗೇಜ್ ಪರಿವರ್ತನೆ, ವಿದ್ಯುದೀಕರಣ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಒದಗಿಸುತ್ತಿರುವ ಹಣ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. 2014–19ನೇ ಸಾಲಿನಲ್ಲಿ ಪ್ರತಿವರ್ಷ ₹2,702 ಕೋಟಿ ಒದಗಿಸಲಾಗಿದೆ. 2019–20ರಲ್ಲಿ ₹3,386 ಕೋಟಿ, 2020–21ರಲ್ಲಿ ₹4,220 ಕೋಟಿ, 2021–22ರಲ್ಲಿ ₹4,227, 2022–23ರಲ್ಲಿ ₹6,091 ಕೋಟಿ ಒದಗಿಸಲಾಗಿದೆ. ಈ ವರ್ಷದ ಬಜೆಟ್ನಲ್ಲಿ ₹7,561 ಕೋಟಿ ನೀಡಲಾಗಿದೆ. ಇದು 2009-14ರ ಅವಧಿಯಲ್ಲಿ ಒದಗಿಸಿರುವ ಅನುದಾನಕ್ಕೆ ಹೋಲಿಸಿದರೆ ಶೇ 806 ಪಟ್ಟು ಅಧಿಕ’ ಎಂದು ಅವರು ಪ್ರತಿಪಾದಿಸಿದ್ದಾರೆ. </p>.<p>‘ಇತ್ತೀಚಿನ ವರ್ಷಗಳಲ್ಲಿ ರೈಲ್ವೆ ವಿದ್ಯುದೀಕರಣ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಒದಗಿಸಿರಲಿಲ್ಲ. ಮಾರ್ಗಗಳ ವಿದ್ಯುದೀಕರಣ ಕಾಮಗಾರಿಯಲ್ಲಿ ಕರ್ನಾಟಕ ಹಿಂದೆ ಇತ್ತು. ಈ ಸಲದ ಬಜೆಟ್ನಲ್ಲಿ ಹೊಸ ಯೋಜನೆಗಳ ಜತೆಗೆ ದ್ವಿಪಥ ಹಾಗೂ ವಿದ್ಯುದೀಕರಣ ಕಾಮಗಾರಿಗೆ ಹೆಚ್ಚಿನ ಅನುದಾನ ಒದಗಿಸಿದ್ದಾರೆ. ಈ ಅನುದಾನವನ್ನು ಬಳಸಿಕೊಂಡು 2024ರ ಒಳಗೆ ಈ ಕಾಮಗಾರಿಗಳನ್ನು ಪೂರ್ಣಗೊಳಿಸಬಹುದು’ ಎಂದು ರೈಲ್ವೆ ಹೋರಾಟಗಾರ ಕೃಷ್ಣಪ್ರಸಾದ್ ತಿಳಿಸಿದರು. </p>.<p>‘ಈ ವರ್ಷದ ಕೇಂದ್ರ ಬಜೆಟ್ನಲ್ಲಿ ರಾಜ್ಯದ 9 ರೈಲು ಮಾರ್ಗಗಳ ವಿದ್ಯುದೀಕರಣಕ್ಕೆ ₹725 ಕೋಟಿ ಒದಗಿಸಲಾಗಿದೆ. ಇದರಿಂದಾಗಿ, ವಿದ್ಯುದೀಕರಣ ಕಾಮಗಾರಿಗೆ ಇನ್ನಷ್ಟು ವೇಗ ಸಿಗಲಿದೆ’ ಎಂದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>