<p><strong>ನವದೆಹಲಿ:</strong> ‘ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಈ ಸಾಲಿನ ಕೇಂದ್ರ ಬಜೆಟ್ನಲ್ಲಿ ₹7,561 ಕೋಟಿ ಅನುದಾನ ಮೀಸಲಿಡಲಾಗಿದೆ. ಇದು ಕರ್ನಾಟಕಕ್ಕೆ ವರ್ಷವೊಂದರಲ್ಲಿ ಒದಗಿಸಿರುವ ದಾಖಲೆಯ ಮೊತ್ತ’ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2009–2013ರ ಅವಧಿಗೆ ಹೋಲಿಸಿದರೆ ವರ್ಷವೊಂದಕ್ಕೆ ಒದಗಿಸಿರುವ ಅನುದಾನ ಒಂಬತ್ತು ಪಟ್ಟು (ಶೇ 900) ಹೆಚ್ಚಾಗಿದೆ. 2009–14ರ ಅವಧಿಯಲ್ಲಿ ವಾರ್ಷಿಕ ₹841 ಕೋಟಿ ಒದಗಿಸಲಾಗುತ್ತಿತ್ತು. ಇದರಲ್ಲಿ ರಾಜ್ಯದಲ್ಲಿ ಅನುಷ್ಠಾನವಾಗುತ್ತಿರುವ ಹಾಗೂ ರಾಜ್ಯದ ಮೂಲಕ ಹಾದು ಹೋಗುತ್ತಿರುವ ಯೋಜನೆಗಳು ಸೇರಿವೆ’ ಎಂದು ತಿಳಿಸಿದರು.</p>.<p>‘ಕರ್ನಾಟಕದಲ್ಲಿ ಹೊಸ ಮಾರ್ಗಗಳ ನಿರ್ಮಾಣ, ದ್ವಿಪಥ, ಗೇಜ್ ಪರಿವರ್ತನೆ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಒದಗಿಸುತ್ತಿರುವ ಹಣ ವರ್ಷದಿಂದ ವರ್ಷಕ್ಕೆ ಹೆಚ್ಚು ತ್ತಿದೆ. ಕರ್ನಾಟಕದಲ್ಲಿ ₹49,336 ಕೋಟಿ ವೆಚ್ಚದ 4,330 ಕಿ.ಮೀ. ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಇದರಲ್ಲಿ 21 ಹೊಸ ಯೋಜನೆಗಳು ಹಾಗೂ 11 ದ್ವಿಪಥ ಕಾಮಗಾರಿಗಳು ಸೇರಿವೆ’ ಎಂದು ಮಾಹಿತಿ ನೀಡಿದರು. </p>.<p>‘ರಾಜ್ಯದಲ್ಲಿ 55 ನಿಲ್ದಾಣಗಳ ಅಭಿ ವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿನ ಬೈಯಪ್ಪನಹಳ್ಳಿಯ ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ಅಭಿವೃದ್ಧಿಪಡಿಸಲಾಗಿದ್ದು, ಇದು ಇತರ ನಿಲ್ದಾಣಗಳ ಅಭಿವೃದ್ಧಿಗೆ ಮಾದರಿ’ ಎಂದು ಅವರು ಹೇಳಿದರು. </p>.<p>‘ರಾಜ್ಯದಲ್ಲಿ ರೈಲ್ವೆ ಯೋಜನೆಗಳ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಉತ್ತಮ ಸಹಕಾರ ನೀಡುತ್ತಿದೆ. ಯೋಜನೆಗೆ ರಾಜ್ಯದ ಪಾಲು ಭರಿಸುವುದು, ಭೂಸ್ವಾಧೀನ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಅಗತ್ಯ ನೆರವನ್ನು ನೀಡುತ್ತಿದೆ’ ಎಂದರು. </p>.<p><strong>ನೈರುತ್ಯ ರೈಲ್ವೆಗೆ ₹9200 ಕೋಟಿ: </strong>ನೈರುತ್ಯ ರೈಲ್ವೆ ವಿಭಾಗಕ್ಕೆ ₹9200 ಕೋಟಿ ನಿಗದಿಪಡಿಸಲಾಗಿದ್ದು, ಕೇಂದ್ರ ಸರ್ಕಾರ ₹527 ಕೋಟಿ ನೀಡಲಿದೆ. ಉಳಿದ ₹880 ಕೋಟಿಯನ್ನು ರಾಜ್ಯ ಸರ್ಕಾರ ಭರಿಸಬೇಕಿದೆ. ಒಟ್ಟು 22 ಯೋಜನೆಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆಯ ಪಿಂಕ್ ಬುಕ್ನಲ್ಲಿ ತಿಳಿಸಲಾಗಿದೆ. </p>.<p>ರೈಲು ಮಾರ್ಗಗಳ ದ್ವಿಪಥ ಕಾಮಗಾರಿಗೆ ₹1,329 ಕೋಟಿ ಹಂಚಿಕೆ ಮಾಡಲಾಗಿದೆ. </p>.<p>ಮೈಸೂರು–ಚಾಮರಾಜನಗರ ಮಾರ್ಗವನ್ನು ಮೆಟ್ಟುಪಾಳ್ಯಂ ವರೆಗೆ ವಿಸ್ತರಿಸುವ ಮಾರ್ಗಕ್ಕೆ ₹50 ಕೋಟಿ ಪ್ರಕಟಿಸಲಾಗಿದೆ. ಟ್ರ್ಯಾಕ್ಗಳ ದುರಸ್ತಿಗೆ ₹790 ಕೋಟಿ, ರೈಲ್ವೆ ಮೇಲ್ಸೇತುವೆ ಹಾಗೂ ಕೆಳ ಸೇತುವೆಗಳ ನಿರ್ಮಾಣಕ್ಕೆ ₹242 ಕೋಟಿ ನಿಗದಿಪಡಿಸಲಾಗಿದೆ. </p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹಗ್ಗಜಗ್ಗಾಟದಿಂದ ಕೆಲವು ಯೋಜನೆಗಳಿಗೆ ಹಲವು ವರ್ಷಗಳಿಂದ ನಿಗದಿತ ಅನುದಾನ ಒದಗಿಸಿರಲಿಲ್ಲ. ಈ ವರ್ಷ ಇಂತಹ ಯೋಜನೆಗಳಿಗೆ ಅನುದಾನ ಕೊಡಲಾಗಿದೆ. ಹಲವು ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲನ್ನು ಒದಗಿಸಬೇಕಿದೆ. </p>.<p>ಈ ವರ್ಷ ಹೊಸದಾಗಿ ಮಾರಿಕುಪ್ಪಂ– ಕುಪ್ಪಂ ಮಾರ್ಗವನ್ನು ಪ್ರಸ್ತಾಪಿಸಲಾಗಿದ್ದು, ಕೇಂದ್ರ ಸರ್ಕಾರವೇ ಇದಕ್ಕೆ ₹200 ಕೋಟಿ ಕೊಡಲಿದೆ. </p>.<p><strong>‘ಚಾಲ್ತಿ ಯೋಜನೆಗೆ ಹೆಚ್ಚು ಹಣ’</strong></p>.<p>‘ದ್ವಿಪಥ, ವಿದ್ಯುದ್ದೀಕರಣ ಕಾಮಗಾರಿಗೆ ಹೆಚ್ಚಿನ ಅನುದಾನ ಒದಗಿಸಿರುವುದು ಉತ್ತಮ ಬೆಳವಣಿಗೆ. ಈ<br />ಅನುದಾನ ಬಳಸಿಕೊಂಡು 2024ರ ಒಳಗೆ ಮಾರ್ಗಗಳ ವಿದ್ಯುದ್ದೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಬಹುದು ಎಂದು ರೈಲ್ವೆ ಹೋರಾಟಗಾರ ಕೃಷ್ಣಪ್ರಸಾದ್ ತಿಳಿಸಿದರು.</p>.<p><strong>‘ಸ್ಥಳೀಯ ಆಹಾರ’</strong></p>.<p>‘ದಕ್ಷಿಣ ಭಾರತದ ರೈಲುಗಳಲ್ಲಿ ಉತ್ತರ ಭಾರತದ ಆಹಾರಗಳನ್ನು ಒದಗಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ಹೀಗಾಗಿ, ರೈಲಿನಲ್ಲಿ ಆಯಾ ಪ್ರದೇಶದ ಆಹಾರಗಳನ್ನೇ ಒದಗಿಸಲು ತೀರ್ಮಾನಿಸಲಾಗಿದೆ’ ಎಂದು ಅಶ್ವಿನಿ ವೈಷ್ಣವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಈ ಸಾಲಿನ ಕೇಂದ್ರ ಬಜೆಟ್ನಲ್ಲಿ ₹7,561 ಕೋಟಿ ಅನುದಾನ ಮೀಸಲಿಡಲಾಗಿದೆ. ಇದು ಕರ್ನಾಟಕಕ್ಕೆ ವರ್ಷವೊಂದರಲ್ಲಿ ಒದಗಿಸಿರುವ ದಾಖಲೆಯ ಮೊತ್ತ’ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2009–2013ರ ಅವಧಿಗೆ ಹೋಲಿಸಿದರೆ ವರ್ಷವೊಂದಕ್ಕೆ ಒದಗಿಸಿರುವ ಅನುದಾನ ಒಂಬತ್ತು ಪಟ್ಟು (ಶೇ 900) ಹೆಚ್ಚಾಗಿದೆ. 2009–14ರ ಅವಧಿಯಲ್ಲಿ ವಾರ್ಷಿಕ ₹841 ಕೋಟಿ ಒದಗಿಸಲಾಗುತ್ತಿತ್ತು. ಇದರಲ್ಲಿ ರಾಜ್ಯದಲ್ಲಿ ಅನುಷ್ಠಾನವಾಗುತ್ತಿರುವ ಹಾಗೂ ರಾಜ್ಯದ ಮೂಲಕ ಹಾದು ಹೋಗುತ್ತಿರುವ ಯೋಜನೆಗಳು ಸೇರಿವೆ’ ಎಂದು ತಿಳಿಸಿದರು.</p>.<p>‘ಕರ್ನಾಟಕದಲ್ಲಿ ಹೊಸ ಮಾರ್ಗಗಳ ನಿರ್ಮಾಣ, ದ್ವಿಪಥ, ಗೇಜ್ ಪರಿವರ್ತನೆ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಒದಗಿಸುತ್ತಿರುವ ಹಣ ವರ್ಷದಿಂದ ವರ್ಷಕ್ಕೆ ಹೆಚ್ಚು ತ್ತಿದೆ. ಕರ್ನಾಟಕದಲ್ಲಿ ₹49,336 ಕೋಟಿ ವೆಚ್ಚದ 4,330 ಕಿ.ಮೀ. ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಇದರಲ್ಲಿ 21 ಹೊಸ ಯೋಜನೆಗಳು ಹಾಗೂ 11 ದ್ವಿಪಥ ಕಾಮಗಾರಿಗಳು ಸೇರಿವೆ’ ಎಂದು ಮಾಹಿತಿ ನೀಡಿದರು. </p>.<p>‘ರಾಜ್ಯದಲ್ಲಿ 55 ನಿಲ್ದಾಣಗಳ ಅಭಿ ವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿನ ಬೈಯಪ್ಪನಹಳ್ಳಿಯ ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ಅಭಿವೃದ್ಧಿಪಡಿಸಲಾಗಿದ್ದು, ಇದು ಇತರ ನಿಲ್ದಾಣಗಳ ಅಭಿವೃದ್ಧಿಗೆ ಮಾದರಿ’ ಎಂದು ಅವರು ಹೇಳಿದರು. </p>.<p>‘ರಾಜ್ಯದಲ್ಲಿ ರೈಲ್ವೆ ಯೋಜನೆಗಳ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಉತ್ತಮ ಸಹಕಾರ ನೀಡುತ್ತಿದೆ. ಯೋಜನೆಗೆ ರಾಜ್ಯದ ಪಾಲು ಭರಿಸುವುದು, ಭೂಸ್ವಾಧೀನ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಅಗತ್ಯ ನೆರವನ್ನು ನೀಡುತ್ತಿದೆ’ ಎಂದರು. </p>.<p><strong>ನೈರುತ್ಯ ರೈಲ್ವೆಗೆ ₹9200 ಕೋಟಿ: </strong>ನೈರುತ್ಯ ರೈಲ್ವೆ ವಿಭಾಗಕ್ಕೆ ₹9200 ಕೋಟಿ ನಿಗದಿಪಡಿಸಲಾಗಿದ್ದು, ಕೇಂದ್ರ ಸರ್ಕಾರ ₹527 ಕೋಟಿ ನೀಡಲಿದೆ. ಉಳಿದ ₹880 ಕೋಟಿಯನ್ನು ರಾಜ್ಯ ಸರ್ಕಾರ ಭರಿಸಬೇಕಿದೆ. ಒಟ್ಟು 22 ಯೋಜನೆಗಳಿಗೆ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆಯ ಪಿಂಕ್ ಬುಕ್ನಲ್ಲಿ ತಿಳಿಸಲಾಗಿದೆ. </p>.<p>ರೈಲು ಮಾರ್ಗಗಳ ದ್ವಿಪಥ ಕಾಮಗಾರಿಗೆ ₹1,329 ಕೋಟಿ ಹಂಚಿಕೆ ಮಾಡಲಾಗಿದೆ. </p>.<p>ಮೈಸೂರು–ಚಾಮರಾಜನಗರ ಮಾರ್ಗವನ್ನು ಮೆಟ್ಟುಪಾಳ್ಯಂ ವರೆಗೆ ವಿಸ್ತರಿಸುವ ಮಾರ್ಗಕ್ಕೆ ₹50 ಕೋಟಿ ಪ್ರಕಟಿಸಲಾಗಿದೆ. ಟ್ರ್ಯಾಕ್ಗಳ ದುರಸ್ತಿಗೆ ₹790 ಕೋಟಿ, ರೈಲ್ವೆ ಮೇಲ್ಸೇತುವೆ ಹಾಗೂ ಕೆಳ ಸೇತುವೆಗಳ ನಿರ್ಮಾಣಕ್ಕೆ ₹242 ಕೋಟಿ ನಿಗದಿಪಡಿಸಲಾಗಿದೆ. </p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹಗ್ಗಜಗ್ಗಾಟದಿಂದ ಕೆಲವು ಯೋಜನೆಗಳಿಗೆ ಹಲವು ವರ್ಷಗಳಿಂದ ನಿಗದಿತ ಅನುದಾನ ಒದಗಿಸಿರಲಿಲ್ಲ. ಈ ವರ್ಷ ಇಂತಹ ಯೋಜನೆಗಳಿಗೆ ಅನುದಾನ ಕೊಡಲಾಗಿದೆ. ಹಲವು ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲನ್ನು ಒದಗಿಸಬೇಕಿದೆ. </p>.<p>ಈ ವರ್ಷ ಹೊಸದಾಗಿ ಮಾರಿಕುಪ್ಪಂ– ಕುಪ್ಪಂ ಮಾರ್ಗವನ್ನು ಪ್ರಸ್ತಾಪಿಸಲಾಗಿದ್ದು, ಕೇಂದ್ರ ಸರ್ಕಾರವೇ ಇದಕ್ಕೆ ₹200 ಕೋಟಿ ಕೊಡಲಿದೆ. </p>.<p><strong>‘ಚಾಲ್ತಿ ಯೋಜನೆಗೆ ಹೆಚ್ಚು ಹಣ’</strong></p>.<p>‘ದ್ವಿಪಥ, ವಿದ್ಯುದ್ದೀಕರಣ ಕಾಮಗಾರಿಗೆ ಹೆಚ್ಚಿನ ಅನುದಾನ ಒದಗಿಸಿರುವುದು ಉತ್ತಮ ಬೆಳವಣಿಗೆ. ಈ<br />ಅನುದಾನ ಬಳಸಿಕೊಂಡು 2024ರ ಒಳಗೆ ಮಾರ್ಗಗಳ ವಿದ್ಯುದ್ದೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಬಹುದು ಎಂದು ರೈಲ್ವೆ ಹೋರಾಟಗಾರ ಕೃಷ್ಣಪ್ರಸಾದ್ ತಿಳಿಸಿದರು.</p>.<p><strong>‘ಸ್ಥಳೀಯ ಆಹಾರ’</strong></p>.<p>‘ದಕ್ಷಿಣ ಭಾರತದ ರೈಲುಗಳಲ್ಲಿ ಉತ್ತರ ಭಾರತದ ಆಹಾರಗಳನ್ನು ಒದಗಿಸುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ಹೀಗಾಗಿ, ರೈಲಿನಲ್ಲಿ ಆಯಾ ಪ್ರದೇಶದ ಆಹಾರಗಳನ್ನೇ ಒದಗಿಸಲು ತೀರ್ಮಾನಿಸಲಾಗಿದೆ’ ಎಂದು ಅಶ್ವಿನಿ ವೈಷ್ಣವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>