ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆ: 273 ರೈಲು ಸಂಚಾರ ರದ್ದು

ಅಕ್ಷರ ಗಾತ್ರ

ಬೆಂಗಳೂರು: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿದಿದ್ದು, ಮಂಗಳವಾರವೂ ಉತ್ತರ ಭಾರತದಲ್ಲಿ 273 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.

103 ಎಕ್ಸ್‌ಪ್ರೆಸ್ ರೈಲುಗಳು ಮತ್ತು 167 ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ರದ್ದುಪಡಿಸಿರುವುದಾಗಿ ರೈಲ್ವೆ ಇಲಾಖೆ ಹೇಳಿದೆ.

ಪ್ರತಿಭಟನೆಯ ಕಾವು ಕಡಿಮೆಯಾಗಿದ್ದರೂ, ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಪ್ರದೇಶಗಳಲ್ಲಿ ರೈಲುಗಳ ಸಂಚಾರವನ್ನು ತಡೆಹಿಡಿಯಲಾಗಿದೆ. ಮುಂದಿನ ಎರಡು–ಮೂರು ದಿನಗಳಲ್ಲಿ ಎಲ್ಲ ರೈಲುಗಳ ಸಂಚಾರ ಯಥಾಸ್ಥಿತಿಗೆ ಬರಲಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಕೇಂದ್ರ ರೈಲ್ವೆ ವಿಭಾಗದಲ್ಲಿ ಹೆಚ್ಚಿನ ರೈಲುಗಳ ಸಂಚಾರ ರದ್ದುಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT