ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆ: 273 ರೈಲು ಸಂಚಾರ ರದ್ದು

ಬೆಂಗಳೂರು: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿದಿದ್ದು, ಮಂಗಳವಾರವೂ ಉತ್ತರ ಭಾರತದಲ್ಲಿ 273 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.
103 ಎಕ್ಸ್ಪ್ರೆಸ್ ರೈಲುಗಳು ಮತ್ತು 167 ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ರದ್ದುಪಡಿಸಿರುವುದಾಗಿ ರೈಲ್ವೆ ಇಲಾಖೆ ಹೇಳಿದೆ.
ಪ್ರತಿಭಟನೆಯ ಕಾವು ಕಡಿಮೆಯಾಗಿದ್ದರೂ, ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಪ್ರದೇಶಗಳಲ್ಲಿ ರೈಲುಗಳ ಸಂಚಾರವನ್ನು ತಡೆಹಿಡಿಯಲಾಗಿದೆ. ಮುಂದಿನ ಎರಡು–ಮೂರು ದಿನಗಳಲ್ಲಿ ಎಲ್ಲ ರೈಲುಗಳ ಸಂಚಾರ ಯಥಾಸ್ಥಿತಿಗೆ ಬರಲಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ಅಗ್ನಿಪಥ: ಪ್ರತಿಭಟನೆ, ಹಾನಿ ಮಾಡಿದವರಿಂದಲೇ ನಷ್ಟ ವಸೂಲಿಗೆ ಕ್ರಮ
ಪೂರ್ವ ಕೇಂದ್ರ ರೈಲ್ವೆ ವಿಭಾಗದಲ್ಲಿ ಹೆಚ್ಚಿನ ರೈಲುಗಳ ಸಂಚಾರ ರದ್ದುಪಡಿಸಲಾಗಿತ್ತು.
‘ಅಗ್ನಿಪಥ’ ವಿರುದ್ಧ ಪ್ರತಿಭಟನೆ: ಒಂದೇ ದಿನ 483 ರೈಲುಗಳ ಸಂಚಾರ ರದ್ದು
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.