<p class="title"><strong>ನವದೆಹಲಿ</strong>: ಪ್ರತಿಕೂಲ ಹವಾಮಾನದ ನಡುವೆಯೂ 24 ಗಂಟೆಗಳ ಅವಧಿಯೊಳಗೆ 12 ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳು 969 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು 6 ರಾಜ್ಯಗಳಿಗೆ ಸಾಗಿಸಿವೆ ಎಂದು ಬುಧವಾರ ರೈಲ್ವೆ ಇಲಾಖೆಯು ತಿಳಿಸಿದೆ.</p>.<p class="title">ಮೂರು ರೈಲುಗಳು ತಮಿಳುನಾಡನ್ನು, ನಾಲ್ಕು ರೈಲುಗಳು ಆಂಧ್ರಕ್ಕೆ, ತಲಾ ಒಂದೊಂದು ರೈಲುಗಳು ದೆಹಲಿ, ಮಧ್ಯಪ್ರದೇಶ, ಉತ್ತರ ಪ್ರದೇಶ, ಅಸ್ಸಾಂ ಮತ್ತು ಕೇರಳಕ್ಕೆ ತಲುಪಿವೆ. ಈ ರೈಲುಗಳು ಒಡಿಶಾ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ರಾಜ್ಯಗಳಿಂದ ಆಮ್ಲಜನಕವನ್ನು ಸಂಗ್ರಹಿಸಿಕೊಂಡು ನಿಗದಿತ ಸ್ಥಳಗಳಿಗೆ ತಲುಪಿವೆ ಎಂದೂ ಇಲಾಖೆ ಮಾಹಿತಿ ನೀಡಿದೆ.</p>.<p class="bodytext">ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಿಗೆ ಬುಧವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ 130ರಿಂದ 140 ಕಿ.ಮೀ. ಗಾಳಿಯ ವೇಗದಲ್ಲಿ ಯಸ್ ಚಂಡಮಾರುತ ಅಪ್ಪಳಿಸಿತ್ತು. ಇದರ ನಡುವೆಯೇ ಈ ರಾಜ್ಯಗಳಲ್ಲಿ ಸಮುದ್ರತೀರದ ಪಟ್ಟಣ ಪ್ರದೇಶಗಳನ್ನು ಹಾದು ಬಂದ ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳು ಸುಮಾರು ಪ್ರತಿಕೂಲ ಹವಾಮಾನ ಪರಿಸ್ಥಿತಿಯ ನಡುವೆಯೇ ತಮ್ಮ ಗಮ್ಯಸ್ಥಾನಗಳಿಗೆ ತಲುಪಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಪ್ರತಿಕೂಲ ಹವಾಮಾನದ ನಡುವೆಯೂ 24 ಗಂಟೆಗಳ ಅವಧಿಯೊಳಗೆ 12 ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳು 969 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು 6 ರಾಜ್ಯಗಳಿಗೆ ಸಾಗಿಸಿವೆ ಎಂದು ಬುಧವಾರ ರೈಲ್ವೆ ಇಲಾಖೆಯು ತಿಳಿಸಿದೆ.</p>.<p class="title">ಮೂರು ರೈಲುಗಳು ತಮಿಳುನಾಡನ್ನು, ನಾಲ್ಕು ರೈಲುಗಳು ಆಂಧ್ರಕ್ಕೆ, ತಲಾ ಒಂದೊಂದು ರೈಲುಗಳು ದೆಹಲಿ, ಮಧ್ಯಪ್ರದೇಶ, ಉತ್ತರ ಪ್ರದೇಶ, ಅಸ್ಸಾಂ ಮತ್ತು ಕೇರಳಕ್ಕೆ ತಲುಪಿವೆ. ಈ ರೈಲುಗಳು ಒಡಿಶಾ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್ ರಾಜ್ಯಗಳಿಂದ ಆಮ್ಲಜನಕವನ್ನು ಸಂಗ್ರಹಿಸಿಕೊಂಡು ನಿಗದಿತ ಸ್ಥಳಗಳಿಗೆ ತಲುಪಿವೆ ಎಂದೂ ಇಲಾಖೆ ಮಾಹಿತಿ ನೀಡಿದೆ.</p>.<p class="bodytext">ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಿಗೆ ಬುಧವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ 130ರಿಂದ 140 ಕಿ.ಮೀ. ಗಾಳಿಯ ವೇಗದಲ್ಲಿ ಯಸ್ ಚಂಡಮಾರುತ ಅಪ್ಪಳಿಸಿತ್ತು. ಇದರ ನಡುವೆಯೇ ಈ ರಾಜ್ಯಗಳಲ್ಲಿ ಸಮುದ್ರತೀರದ ಪಟ್ಟಣ ಪ್ರದೇಶಗಳನ್ನು ಹಾದು ಬಂದ ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳು ಸುಮಾರು ಪ್ರತಿಕೂಲ ಹವಾಮಾನ ಪರಿಸ್ಥಿತಿಯ ನಡುವೆಯೇ ತಮ್ಮ ಗಮ್ಯಸ್ಥಾನಗಳಿಗೆ ತಲುಪಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>