ನವದೆಹಲಿ: ಮುಂದಿನ ಆದೇಶದವರೆಗೂ ಎಲ್ಲ ಸಾಮಾನ್ಯ ಪ್ಯಾಸೆಂಜರ್ ರೈಲು ಸೇವೆ ಹಾಗೂ ಉಪನಗರ ರೈಲು ಸೇವೆಗಳನ್ನು ಸ್ಥಗಿತಗೊಳಿಸಿರುವುದಾಗಿ ರೈಲ್ವೆ ಇಲಾಖೆ ಮಂಗಳವಾರ ಮಾಹಿತಿ ನೀಡಿದ್ದು, 230 ವಿಶೇಷ ರೈಲುಗಳ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದೆ.
‘ರಾಜ್ಯ ಸರ್ಕಾರದ ಮನವಿ ಮೇರೆಗೆ ಮುಂಬೈನಲ್ಲಿ ಕೆಲ ಉಪನಗರ ರೈಲುಗಳ ಕಾರ್ಯಾಚರಣೆ ನಡೆಯುತ್ತಿದೆ. ಇದು ಮುಂದುವರಿಯಲಿದೆ’ ಎಂದು ಇಲಾಖೆ ತಿಳಿಸಿದೆ. ಈ ಹಿಂದಿನ ಆದೇಶದಲ್ಲಿ ಆಗಸ್ಟ್ 12ರವರೆಗೂ ರೈಲು ಸೇವೆ ಸ್ಥಗಿತಗೊಳಿಸಿರುವುದಾಗಿ ಇಲಾಖೆ ಘೋಷಿಸಿತ್ತು. ಇದರಿಂದಾಗಿ ಇಲಾಖೆಗೆ ಒಟ್ಟು ₹40 ಸಾವಿರ ಕೋಟಿ ಆದಾಯ ಖೋತಾ ಆಗಲಿದೆ ಎಂದು ಊಹಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.