<p><strong>ನವದೆಹಲಿ: </strong>ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಲಿರುವ ಕಾರಣ, ರೈಲ್ವೆಯು ಹೆಚ್ಚುವರಿಯಾಗಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.</p>.<p>ಅ. 15ರಿಂದ ಜನ ಶತಾಬ್ದಿ, ತುರಂತ್, ರಾಜಧಾನಿ ಹಾಗೂ ಎಸಿ ಎಕ್ಸ್ಪ್ರೆಸ್ ಸೇರಿದಂತೆ 40 ರೈಲುಗಳನ್ನು ಓಡಿಸಲಾಗುವುದು ಎಂದು ಉತ್ತರ ರೈಲ್ವೆ ಘೋಷಿಸಿದೆ.</p>.<p>ವಿವಿಧ ವಿಭಾಗಗಳಿಂದ ಅ.16ರಿಂದ ನ.30ರ ವರೆಗೆ 39 ವಿಶೇಷ ರೈಲುಗಳ ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ ಎಂದು ಮೂಲಗಳು ಹೇಳಿವೆ.</p>.<p>ಲಖನೌ–ನವದೆಹಲಿ ಮತ್ತು ಅಹಮದಾಬಾದ್– ಮುಂಬೈ ನಡುವೆ ತೇಜಸ್ ಎಕ್ಸ್ಪ್ರೆಸ್ಗಳ ಸಂಚಾರವನ್ನು ನಿರ್ವಹಿಸುತ್ತಿರುವ ಐಆರ್ಸಿಟಿಸಿ, ಅ. 17ರಿಂದ ಈ ರೈಲುಗಳ ಸಂಚಾರವನ್ನು ಪುನರಾರಂಭಿಸಲಾಗುವುದು ಎಂದು ಹೇಳಿದೆ.</p>.<p>‘ವಿಶೇಷ ರೈಲುಗಳು ಅ. 16ರಿಂದ ನ. 30ರವರೆಗೆ 200 ವಿಶೇಷ ರೈಲುಗಳನ್ನು ಓಡಿಸಲಾಗುವುದು’ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ವಿ.ಕೆ.ಯಾದವ್ ಕೆಲ ದಿನಗಳ ಹಿಂದೆಯಷ್ಟೇ ಹೇಳಿದ್ದರು.</p>.<p>ದೇಶದಲ್ಲಿ ಕೋವಿಡ್ ಪ್ರಸರಣವನ್ನು ತಡೆಗಟ್ಟುವ ಸಂಬಂಧ ಎಲ್ಲ ಪ್ರಯಾಣಿಕ ರೈಲುಗಳ ಸಂಚಾರವನ್ನುಮಾರ್ಚ್ 22ರಿಂದ ರೈಲ್ವೆ ರದ್ದು ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಲಿರುವ ಕಾರಣ, ರೈಲ್ವೆಯು ಹೆಚ್ಚುವರಿಯಾಗಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.</p>.<p>ಅ. 15ರಿಂದ ಜನ ಶತಾಬ್ದಿ, ತುರಂತ್, ರಾಜಧಾನಿ ಹಾಗೂ ಎಸಿ ಎಕ್ಸ್ಪ್ರೆಸ್ ಸೇರಿದಂತೆ 40 ರೈಲುಗಳನ್ನು ಓಡಿಸಲಾಗುವುದು ಎಂದು ಉತ್ತರ ರೈಲ್ವೆ ಘೋಷಿಸಿದೆ.</p>.<p>ವಿವಿಧ ವಿಭಾಗಗಳಿಂದ ಅ.16ರಿಂದ ನ.30ರ ವರೆಗೆ 39 ವಿಶೇಷ ರೈಲುಗಳ ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ ಎಂದು ಮೂಲಗಳು ಹೇಳಿವೆ.</p>.<p>ಲಖನೌ–ನವದೆಹಲಿ ಮತ್ತು ಅಹಮದಾಬಾದ್– ಮುಂಬೈ ನಡುವೆ ತೇಜಸ್ ಎಕ್ಸ್ಪ್ರೆಸ್ಗಳ ಸಂಚಾರವನ್ನು ನಿರ್ವಹಿಸುತ್ತಿರುವ ಐಆರ್ಸಿಟಿಸಿ, ಅ. 17ರಿಂದ ಈ ರೈಲುಗಳ ಸಂಚಾರವನ್ನು ಪುನರಾರಂಭಿಸಲಾಗುವುದು ಎಂದು ಹೇಳಿದೆ.</p>.<p>‘ವಿಶೇಷ ರೈಲುಗಳು ಅ. 16ರಿಂದ ನ. 30ರವರೆಗೆ 200 ವಿಶೇಷ ರೈಲುಗಳನ್ನು ಓಡಿಸಲಾಗುವುದು’ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ವಿ.ಕೆ.ಯಾದವ್ ಕೆಲ ದಿನಗಳ ಹಿಂದೆಯಷ್ಟೇ ಹೇಳಿದ್ದರು.</p>.<p>ದೇಶದಲ್ಲಿ ಕೋವಿಡ್ ಪ್ರಸರಣವನ್ನು ತಡೆಗಟ್ಟುವ ಸಂಬಂಧ ಎಲ್ಲ ಪ್ರಯಾಣಿಕ ರೈಲುಗಳ ಸಂಚಾರವನ್ನುಮಾರ್ಚ್ 22ರಿಂದ ರೈಲ್ವೆ ರದ್ದು ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>