ರಾಜ್ಯದ ಅಸಿಫಾಬಾದ್, ನಿರ್ಮಲ್, ನಿಜಾಮಾಬಾದ್, ಸಿರಿಸಿಲ್ಲಾ, ಭೂಪಾಲ್ಪಲ್ಲಿ ಮತ್ತು ಮುಲುಗು,ಆದಿಲ್ ಬಾದ್, ಕೊಮರಂ ಭೀಮ್ ಆಸಿಫಾಬಾದ್, ಮಂಚೇರಿಯಲ್, ಪೆದ್ದಪಲ್ಲಿ, ಜಯಶಂಕರ್ ಭೂಪಾಲ್ಪಲ್ಲಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.