<p><strong>ಡೆಹ್ರಾಡೂನ್/ತಿರುವನಂತಪುರ (ಪಿಟಿಐ):</strong> ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಿಂದಾಗಿ ನಲುಗಿರುವ ಉತ್ತರಾಖಂಡ ಮತ್ತು ಕೇರಳದಲ್ಲಿ ಬುಧವಾರ ಮಳೆಯು ಅಲ್ಪ ಬಿಡುವು ನೀಡಿತ್ತು. ಹಾಗಾಗಿ, ರಕ್ಷಣೆ ಮತ್ತು ಪರಿಹಾರ ಕಾರ್ಯ ಭರದಿಂದ ನಡೆದಿದೆ.</p>.<p>ಸತತ ಎರಡು ದಿನ ಸುರಿದ ಮಳೆಯ ಪರಿಣಾಮದಿಂದ ಚೇತರಿಸಿಕೊಳ್ಳಲು ಉತ್ತರಾಖಂಡಕ್ಕೆ ಇನ್ನೂ ಬಹಳ ಕಾಲ ಬೇಕಾಗಬಹುದು. ಮಳೆಯಿಂದಾಗಿ ಭಾನುವಾರದಿಂದ ಬುಧವಾರದವರೆಗೆ 52 ಮಂದಿ ಮೃತಪಟ್ಟಿದ್ಧಾರೆ. ಮನೆಗಳು ಕುಸಿದಿದ್ದು ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಆತಂಕ ವ್ಯಕ್ತವಾಗಿದೆ. 5 ಮಂದಿ ನಾಪತ್ತೆಯಾಗಿದ್ದು ಅವರಿಗಾಗಿ ಶೋಧ ಮುಂದುವರಿದಿದೆ.</p>.<p>ಭೂಕುಸಿತದಿಂದಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಹಲವು ರಸ್ತೆಗಳಲ್ಲಿ ದೊಡ್ಡ ದೊಡ್ಡ ಕಲ್ಲುಗಳು ಇವೆ. ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತವಾಗಿದೆ.</p>.<p>ಮಳೆಯ ಅಬ್ಬರ ನಿಂತಿದೆ. ಆದರೆ, ಅವಶೇಷಗಳಡಿಯಲ್ಲಿ ಸಿಲುಕಿದವರ ಪತ್ತೆ ಮತ್ತು ರಕ್ಷಣೆ, ವಿದ್ಯುತ್ ಸಂಪರ್ಕ ಮರಸ್ಥಾಪನೆಯು ದೊಡ್ಡ ಸವಾಲಾಗಿದೆ. ಮಳೆಯಿಂದ ಭಾರಿ ಸಮಸ್ಯೆಗೆ ಒಳಗಾಗಿದ್ದ ಪ್ರವಾಸಿ ತಾಣ ನೈನಿತಾಲ್ ಸಹಜ ಸ್ಥಿತಿಗೆ ಮರಳುತ್ತಿದೆ.</p>.<p>ಕೇರಳದಲ್ಲಿ ಮಳೆ ಮತ್ತು ಪ್ರವಾಹದ ಹೊಡೆತಕ್ಕೆ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿದೆ. ಆರು ಮಂದಿಗಾಗಿ ಶೋಧ ಕಾರ್ಯ ಮುಂದುವರಿದಿದೆ. 217 ಮನೆಗಳು ನಾಶವಾಗಿವೆ. ಸಂತ್ರಸ್ತರಿಗಾಗಿ 304 ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿಧಾನಸಭೆಗೆ ಬುಧವಾರ ಮಾಹಿತಿ ನೀಡಿದ್ದಾರೆ.</p>.<p>3,851 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿತ್ತು.ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ 11 ತಂಡಗಳು ವಿವಿಧ ಜಿಲ್ಲೆಗಳಲ್ಲಿ ಇವೆ. ಭಾರತೀಯ ಸೇನೆಯ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ಧಾರೆ. ವಾಯುಪಡೆ ಮತ್ತು ನೌಕಾಪಡೆಯ ಹೆಲಿಕಾಪ್ಟರ್ಗಳನ್ನು ಕೂಡ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ.</p>.<p>ಪ್ರವಾಹಪೀಡಿತ ಪ್ರದೇಶಗಳಿಂದ 1,300ಕ್ಕೂ ಹೆಚ್ಚು ಜನರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ರಕ್ಷಿಸಿದೆ.</p>.<p>ಕುಮಾವೊನ್ ಪ್ರದೇಶವು ಭಾರಿ ಮಳೆಯಿಂದಾಗಿ ಅತಿ ಹೆಚ್ಚು ತೊಂದರೆಗೆ ಒಳಗಾಗಿದೆ. ಇಲ್ಲಿ ಹಲವು ಮನೆಗಳು ನೆಲಸಮವಾಗಿವೆ. ಹಲವು ಸೇತುವೆಗಳು ಕೊಚ್ಚಿ ಹೋಗಿವೆ.</p>.<p>ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆ, ಉತ್ತರ ಪ್ರದೇಶದ ಲಖಿಂಪುರ–ಖೇರಿ, ಸೀತಾಪುರ, ವಾರಾಣಸಿ, ಗೋರಖಪುರ ಮತ್ತು ಬಹರೈಚ್ ಜಿಲ್ಲೆಗಳಲ್ಲಿಯೂ ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್/ತಿರುವನಂತಪುರ (ಪಿಟಿಐ):</strong> ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಿಂದಾಗಿ ನಲುಗಿರುವ ಉತ್ತರಾಖಂಡ ಮತ್ತು ಕೇರಳದಲ್ಲಿ ಬುಧವಾರ ಮಳೆಯು ಅಲ್ಪ ಬಿಡುವು ನೀಡಿತ್ತು. ಹಾಗಾಗಿ, ರಕ್ಷಣೆ ಮತ್ತು ಪರಿಹಾರ ಕಾರ್ಯ ಭರದಿಂದ ನಡೆದಿದೆ.</p>.<p>ಸತತ ಎರಡು ದಿನ ಸುರಿದ ಮಳೆಯ ಪರಿಣಾಮದಿಂದ ಚೇತರಿಸಿಕೊಳ್ಳಲು ಉತ್ತರಾಖಂಡಕ್ಕೆ ಇನ್ನೂ ಬಹಳ ಕಾಲ ಬೇಕಾಗಬಹುದು. ಮಳೆಯಿಂದಾಗಿ ಭಾನುವಾರದಿಂದ ಬುಧವಾರದವರೆಗೆ 52 ಮಂದಿ ಮೃತಪಟ್ಟಿದ್ಧಾರೆ. ಮನೆಗಳು ಕುಸಿದಿದ್ದು ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಆತಂಕ ವ್ಯಕ್ತವಾಗಿದೆ. 5 ಮಂದಿ ನಾಪತ್ತೆಯಾಗಿದ್ದು ಅವರಿಗಾಗಿ ಶೋಧ ಮುಂದುವರಿದಿದೆ.</p>.<p>ಭೂಕುಸಿತದಿಂದಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಹಲವು ರಸ್ತೆಗಳಲ್ಲಿ ದೊಡ್ಡ ದೊಡ್ಡ ಕಲ್ಲುಗಳು ಇವೆ. ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತವಾಗಿದೆ.</p>.<p>ಮಳೆಯ ಅಬ್ಬರ ನಿಂತಿದೆ. ಆದರೆ, ಅವಶೇಷಗಳಡಿಯಲ್ಲಿ ಸಿಲುಕಿದವರ ಪತ್ತೆ ಮತ್ತು ರಕ್ಷಣೆ, ವಿದ್ಯುತ್ ಸಂಪರ್ಕ ಮರಸ್ಥಾಪನೆಯು ದೊಡ್ಡ ಸವಾಲಾಗಿದೆ. ಮಳೆಯಿಂದ ಭಾರಿ ಸಮಸ್ಯೆಗೆ ಒಳಗಾಗಿದ್ದ ಪ್ರವಾಸಿ ತಾಣ ನೈನಿತಾಲ್ ಸಹಜ ಸ್ಥಿತಿಗೆ ಮರಳುತ್ತಿದೆ.</p>.<p>ಕೇರಳದಲ್ಲಿ ಮಳೆ ಮತ್ತು ಪ್ರವಾಹದ ಹೊಡೆತಕ್ಕೆ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿದೆ. ಆರು ಮಂದಿಗಾಗಿ ಶೋಧ ಕಾರ್ಯ ಮುಂದುವರಿದಿದೆ. 217 ಮನೆಗಳು ನಾಶವಾಗಿವೆ. ಸಂತ್ರಸ್ತರಿಗಾಗಿ 304 ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಿಧಾನಸಭೆಗೆ ಬುಧವಾರ ಮಾಹಿತಿ ನೀಡಿದ್ದಾರೆ.</p>.<p>3,851 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿತ್ತು.ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ 11 ತಂಡಗಳು ವಿವಿಧ ಜಿಲ್ಲೆಗಳಲ್ಲಿ ಇವೆ. ಭಾರತೀಯ ಸೇನೆಯ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ಧಾರೆ. ವಾಯುಪಡೆ ಮತ್ತು ನೌಕಾಪಡೆಯ ಹೆಲಿಕಾಪ್ಟರ್ಗಳನ್ನು ಕೂಡ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ.</p>.<p>ಪ್ರವಾಹಪೀಡಿತ ಪ್ರದೇಶಗಳಿಂದ 1,300ಕ್ಕೂ ಹೆಚ್ಚು ಜನರನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ರಕ್ಷಿಸಿದೆ.</p>.<p>ಕುಮಾವೊನ್ ಪ್ರದೇಶವು ಭಾರಿ ಮಳೆಯಿಂದಾಗಿ ಅತಿ ಹೆಚ್ಚು ತೊಂದರೆಗೆ ಒಳಗಾಗಿದೆ. ಇಲ್ಲಿ ಹಲವು ಮನೆಗಳು ನೆಲಸಮವಾಗಿವೆ. ಹಲವು ಸೇತುವೆಗಳು ಕೊಚ್ಚಿ ಹೋಗಿವೆ.</p>.<p>ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆ, ಉತ್ತರ ಪ್ರದೇಶದ ಲಖಿಂಪುರ–ಖೇರಿ, ಸೀತಾಪುರ, ವಾರಾಣಸಿ, ಗೋರಖಪುರ ಮತ್ತು ಬಹರೈಚ್ ಜಿಲ್ಲೆಗಳಲ್ಲಿಯೂ ಎನ್ಡಿಆರ್ಎಫ್ ತಂಡಗಳನ್ನು ನಿಯೋಜಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>