ಶುಕ್ರವಾರ, ಮಾರ್ಚ್ 31, 2023
22 °C

ರಾಜಸ್ಥಾನದಲ್ಲಿ ಆಲಿಕಲ್ಲು ಸಹಿತ ಮಳೆ: ಜನ ಜೀವನ ಅಸ್ತವ್ಯಸ್ತ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ರಾಜಸ್ಥಾನದಲ್ಲಿ ಬಹುತೇಕ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಹೀಗಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉದಯಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಇದರಿಂದ ಹಲವೆಡೆ ರೈತರು ಬೆಳೆದ ಬೆಳೆಗಳು ನಾಶವಾಗಿವೆ. ಈ ಕುರಿತು ಇಂದು ಮಧ್ಯಾಹ್ನ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಪರಿಸ್ಥಿತಿ ಕುರಿತು ಚರ್ಚಿಸಲಿದೆ.

‘ರಾಜ್ಯದ ಪೂರ್ವ ಮತ್ತು ಪಶ್ಚಿಮ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ  ಭಾರೀ ಮಳೆಯಾಗಲಿದೆ’ ಎಂದು ಇಲಾಖೆ ತಿಳಿಸಿದೆ.

ಕರೇಡಾ ಮತ್ತು ಪರ್ಬತ್ಸರ್ 78 ಸೆಂ.ಮೀ.ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆ ದಾಖಲಾಗಿದೆ. ಜೈಪುರದಲ್ಲಿ 24.9 ಸೇರಿದಂತೆ  ಇತರ ಪ್ರದೇಶಗಳಲ್ಲಿ 8 ಸೆಂಮೀಗಿಂತ ಕಡಿಮೆ ಮಳೆಯಾಗಿದೆ. ಜೋಧಪುರದ ಫಲೋಡಿಯಲ್ಲಿ ಕನಿಷ್ಠ ತಾಪಮಾನ 5.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಇನ್ನೂಳಿದಂತೆ  ಸಿರೋಹಿ 8.1 ಡಿಗ್ರಿ ಸೆಲ್ಸಿಯಸ್ ಮತ್ತು ಉದಯಪುರ 14.6 ಡಿಗ್ರಿ ದಾಖಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನು ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು