ಕಾಕಿನಾಡ: ‘ಅಸನಿ’ ಚಂಡಮಾರುತದ ಪ್ರಭಾವದಿಂದ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯ ಹಲವೆಡೆ ಬುಧವಾರ ಬೆಳಿಗ್ಗೆ ಭಾರಿ ಮಳೆಯಾಗಿದೆ.
ಚಂಡಮಾರುತವು ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿಯಿಂದ ಉತ್ತರ ಆಂಧ್ರ ಕರಾವಳಿಯತ್ತ ಚಲಿಸುತ್ತಿದೆ. ಬುಧವಾರ ಬೆಳಿಗ್ಗೆ ಹೊತ್ತಿಗೆ ಕಾಕಿನಾಡ ಪ್ರವೇಶಿಸಬಹುದು ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ ಪ್ರದೀಪ್ ಕುಮಾರ ಜೆನಾ ಮಂಗಳವಾರ ತಿಳಿಸಿದ್ದರು ಎಂದು ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.
ಆಂಧ್ರ ಪ್ರದೇಶದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಗಳೂ ತಿಳಿಸಿದ್ದರು.
ತೆಲಂಗಾಣದ ನಲ್ಗೊಂಡಾ, ಸೂರ್ಯಪೇಟ್, ಭದ್ರಾದ್ರಿ, ಕೊಥಗುಡೆಂ, ಖಮ್ಮಮ್ ಹಾಗೂ ಮುಲುಗು ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
#WATCH | Andhra Pradesh: Tumultuous waves along with gusty winds prevail on the shores of Visakhapatnam as #CycloneAsani approaches
As per IMD, cyclone is very likely to move nearly northwestwards for next few hours & reach Westcentral Bay of Bengal close to Andhra Pradesh coast pic.twitter.com/ISp7vgMXbq