ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Rain Prediction | ತಮಿಳುನಾಡಿನಲ್ಲಿ ಇನ್ನೆರಡು ದಿನ ಮಳೆ: ಹವಾಮಾನ ಇಲಾಖೆ

Last Updated 11 ನವೆಂಬರ್ 2022, 13:56 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಹಲವು ಭಾಗಗಳಲ್ಲಿ ಶುಕ್ರವಾರ ವ್ಯಾಪಕ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯಲ್ಲಿ ನ.13ರ ವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಚೆನ್ನೈ, ಕಾಂಚೀಪುರಂ, ತಿರುವಳ್ಳೂರ್‌, ಚೆಂಗಲ್‌ಪೇಟ್‌, ಕಡಲೂರು, ಕಾವೇರಿ ಜಲಾನಯನ ಪ್ರದೇಶ ಮತ್ತಿತರ ಭಾಗಗಳಲ್ಲಿ ಮಳೆಯಾಗುತ್ತಿದೆ.

ಚೆನ್ನೈ ಸೇರಿ 23 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳನ್ನು ಬಂದ್‌ ಮಾಡಲಾಗಿದೆ. ಧರ್ಮಪುರಿ ಮತ್ತು ಶಿವಗಂಗಾ ಸೇರಿ 6 ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್‌ ಮಾಡಲಾಗಿದೆ.

ಮಳೆಯ ಪರಿಣಾಮ ಹಲವೆಡೆ ವಾಹನಗಳ ಸಂಚಾರಕ್ಕೆ ತೊಡಕುಂಟಾಗಿದೆ.ವಿಮಾನ ಸಂಚಾರಕ್ಕೆ ಯಾವುದೇ ತೊಂದರೆ ಅಗಿಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT