ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿರುವ ಉದ್ಯಮಿ ರಾಜ್ ಕುಂದ್ರಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಇಂದು(ಬುಧವಾರ) ನಡೆಸಲಿದೆ.
ಸೆಷನ್ಸ್ ನ್ಯಾಯಾಲಯವು ಕುಂದ್ರಾ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಬಳಿಕ, ಇದನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ನಲ್ಲಿ ರಾಜ್ ಕುಂದ್ರಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ಕುಂದ್ರಾ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಗಸ್ಟ್ 25ಕ್ಕೆ ಪ್ರತಿಕ್ರಿಯೆ ನೀಡುವಂತೆ ಬಾಂಬೆ ಹೈಕೋರ್ಟ್ ಕಳೆದ ವಾರ ಪೊಲೀಸರಿಗೆ ಸೂಚಿಸಿತ್ತು.