<p><strong>ಪುಣೆ (ಮಹಾರಾಷ್ಟ್ರ): </strong>ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನನ್ನು ತರುವಂತೆ ಮಹಾರಾಷ್ಟ್ರ ನವ ನಿರ್ಮಾಣ ಸೇನಾ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.</p>.<p>ಪುಣೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ‘ದೇಶದಲ್ಲಿ ಶೀಘ್ರ ಏಕರೂಪ ನಾಗರಿಕ ಸಂಹಿತೆ ಹಾಗೂ ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿ ಹೊಸ ಕಾನೂನನ್ನು ಜಾರಿಗೆ ತರಬೇಕು. ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿನಗರ ಎಂದು ಬದಲಾಯಿಸಬೇಕು’ ಎಂದು ಹೇಳಿದ್ದಾರೆ.</p>.<p>‘ಮಸೀದಿಗಳ ಧ್ವನಿವರ್ಧಕಗಳಿಗೆ ಪ್ರತಿಯಾಗಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ನುಡಿಸಲು ನಾನು ನಮ್ಮ ಕಾರ್ಯಕರ್ತರಲ್ಲಿ ಕೇಳಿಕೊಂಡಿದ್ದೆ. ನಂತರ ಸಂಸದೆ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ದಂಪತಿ 'ಮಾತೋಶ್ರೀ' (ಸಿಎಂ ಉದ್ಧವ್ ಠಾಕ್ರೆ ನಿವಾಸ)ದ ಮುಂದೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಹೇಳಿದ್ದರು.</p>.<p>ಆದರೆ, ಅವರನ್ನು ಬಂಧಿಸಿದ್ದರು. ಅಲ್ಲದೇ, ಶಿವಸೇನೆ ಕಾರ್ಯುಕರ್ತರು ಮತ್ತು ರಾಣಾ ದಂಪತಿ ನಡುವೆ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾದರೆ, ‘ಮಾತೋಶ್ರೀ’ ಏನು ಮಸೀದಿಯೇ ಎಂದು ಪ್ರಶ್ನಿಸಿದ್ದಾರೆ.</p>.<p>ಅಯೋಧ್ಯೆಗೆ ಜೂ.5ರಂದು ನೀಡಬೇಕಿದ್ದ ಭೇಟಿಯನ್ನು ಮುಂದೂಡಿರುವುದಾಗಿ ಇತ್ತೀಚೆಗೆ ರಾಜ್ ಠಾಕ್ರೆ ಟ್ವಿಟರ್ನಲ್ಲಿ ಹೇಳಿಕೊಂಡಿದ್ದರು.</p>.<p>‘ಇತ್ತೀಚೆಗೆ ಔರಂಗಾಬಾದ್ನಲ್ಲಿ ಮಾತನಾಡಿದ್ದ ರಾಜ್ ಠಾಕ್ರೆ, ‘ಮೇ 4ರೊಳಗೆ ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ತೆಗೆಯಬೇಕು. ಇಲ್ಲದಿದ್ದರೆ ಮಸೀದಿಗಳ ಎದುರು ಹನುಮಾನ್ ಚಾಲೀಸಾ ಪಠಣ ಆರಂಭಿಸುತ್ತೇವೆ’ ಎಂದು ಹೇಳಿಕೆ ನೀಡಿದ್ದರು.</p>.<p>ಈ ಹಿನ್ನೆಲೆಯಲ್ಲಿ ರಾಜ್ ಠಾಕ್ರೆ ಹಾಗೂ ರ್ಯಾಲಿಯ ಸಂಘಟಕರ ವಿರುದ್ಧ ಔರಂಗಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ (ಮಹಾರಾಷ್ಟ್ರ): </strong>ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನನ್ನು ತರುವಂತೆ ಮಹಾರಾಷ್ಟ್ರ ನವ ನಿರ್ಮಾಣ ಸೇನಾ(ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ.</p>.<p>ಪುಣೆಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ‘ದೇಶದಲ್ಲಿ ಶೀಘ್ರ ಏಕರೂಪ ನಾಗರಿಕ ಸಂಹಿತೆ ಹಾಗೂ ಜನಸಂಖ್ಯೆ ನಿಯಂತ್ರಣಕ್ಕೆ ಸಂಬಂಧಿಸಿ ಹೊಸ ಕಾನೂನನ್ನು ಜಾರಿಗೆ ತರಬೇಕು. ಔರಂಗಾಬಾದ್ ನಗರದ ಹೆಸರನ್ನು ಸಂಭಾಜಿನಗರ ಎಂದು ಬದಲಾಯಿಸಬೇಕು’ ಎಂದು ಹೇಳಿದ್ದಾರೆ.</p>.<p>‘ಮಸೀದಿಗಳ ಧ್ವನಿವರ್ಧಕಗಳಿಗೆ ಪ್ರತಿಯಾಗಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ನುಡಿಸಲು ನಾನು ನಮ್ಮ ಕಾರ್ಯಕರ್ತರಲ್ಲಿ ಕೇಳಿಕೊಂಡಿದ್ದೆ. ನಂತರ ಸಂಸದೆ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ದಂಪತಿ 'ಮಾತೋಶ್ರೀ' (ಸಿಎಂ ಉದ್ಧವ್ ಠಾಕ್ರೆ ನಿವಾಸ)ದ ಮುಂದೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಹೇಳಿದ್ದರು.</p>.<p>ಆದರೆ, ಅವರನ್ನು ಬಂಧಿಸಿದ್ದರು. ಅಲ್ಲದೇ, ಶಿವಸೇನೆ ಕಾರ್ಯುಕರ್ತರು ಮತ್ತು ರಾಣಾ ದಂಪತಿ ನಡುವೆ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾದರೆ, ‘ಮಾತೋಶ್ರೀ’ ಏನು ಮಸೀದಿಯೇ ಎಂದು ಪ್ರಶ್ನಿಸಿದ್ದಾರೆ.</p>.<p>ಅಯೋಧ್ಯೆಗೆ ಜೂ.5ರಂದು ನೀಡಬೇಕಿದ್ದ ಭೇಟಿಯನ್ನು ಮುಂದೂಡಿರುವುದಾಗಿ ಇತ್ತೀಚೆಗೆ ರಾಜ್ ಠಾಕ್ರೆ ಟ್ವಿಟರ್ನಲ್ಲಿ ಹೇಳಿಕೊಂಡಿದ್ದರು.</p>.<p>‘ಇತ್ತೀಚೆಗೆ ಔರಂಗಾಬಾದ್ನಲ್ಲಿ ಮಾತನಾಡಿದ್ದ ರಾಜ್ ಠಾಕ್ರೆ, ‘ಮೇ 4ರೊಳಗೆ ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ತೆಗೆಯಬೇಕು. ಇಲ್ಲದಿದ್ದರೆ ಮಸೀದಿಗಳ ಎದುರು ಹನುಮಾನ್ ಚಾಲೀಸಾ ಪಠಣ ಆರಂಭಿಸುತ್ತೇವೆ’ ಎಂದು ಹೇಳಿಕೆ ನೀಡಿದ್ದರು.</p>.<p>ಈ ಹಿನ್ನೆಲೆಯಲ್ಲಿ ರಾಜ್ ಠಾಕ್ರೆ ಹಾಗೂ ರ್ಯಾಲಿಯ ಸಂಘಟಕರ ವಿರುದ್ಧ ಔರಂಗಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>