ರಾಜ್ ಠಾಕ್ರೆ ಅವರ ರ್ಯಾಲಿಗೆ ಅನುಮತಿ ನೀಡುವಾಗ ಯಾವ ಷರತ್ತುಗಳನ್ನು ವಿಧಿಸಲಾಗಿತ್ತು, ಯಾವುದರ ಉಲ್ಲಂಘನೆಯಾಗಿದೆ ಎಂಬ ಬಗ್ಗೆ ಔರಂಗಾಬಾದ್ ಪೊಲೀಸ್ ಆಯುಕ್ತರು ಪರಿಶೀಲಿಸಲಿದ್ದಾರೆ. ಕಾನೂನು ಕ್ರಮ ಕೈಗೊಂಡು ಹಿರಿಯ ಅಧಿಕಾರಿಗಳಿಗೆ ವರದಿ ನೀಡಲಿದ್ದಾರೆ. ನಾಳೆ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದೇನೆ. ಅಷ್ಟರೊಳಗೆ ಔರಂಗಾಬಾದ್ನಿಂದ ವರದಿಯನ್ನೂ ಪಡೆಯಲಿದ್ದೇವೆ. ನಂತರ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.