ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡು 13 ಜನರ ಸಾವಿಗೆ ಕಾರಣವಾದ ಘಟನೆ ದುರದೃಷ್ಟಕರ ಎಂದು ಟ್ವೀಟ್ ಮಾಡಿರುವ ಸಚಿವ ಸಿಂಗ್, ‘ರಾವತ್ ಅವರು ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥರಾಗಿ ಅಸಾಧಾರಣ ಧೈರ್ಯ ಹಾಗೂ ಶ್ರದ್ಧೆಯಿಂದ ದೇಶಕ್ಕಾಗಿ ಸೇವೆ ಸಲ್ಲಿಸಿದರು. ಸೇನಾಪಡೆ, ವಾಯುಪಡೆ ಹಾಗೂ ನೌಕಾಪಡೆಗಳನ್ನು ಬೆಸೆಯುವ ಯೋಜನೆಯನ್ನು ಸಿದ್ಧಪಡಿಸಿದ್ದರು’ ಎಂದು ಸ್ಮರಿಸಿದ್ದಾರೆ.ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡವರ ಕುಟುಂಬದವರಿಗೆ ಸಾಂತ್ವನಹೇಳಿದ್ದಾರೆ.