ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ: ಆರೋಪಿಗಳಿಗೆ ಶಿಕ್ಷೆಯಾಗುವವರೆಗೆ ಹೆಸರು ಬಹಿರಂಗಬೇಡ- ರಾಜಸ್ಥಾನ ಎಸಿಬಿ

Last Updated 4 ಜನವರಿ 2023, 21:00 IST
ಅಕ್ಷರ ಗಾತ್ರ

ಜೈಪುರ: ಲಂಚ ಪಡೆದ ಆರೋಪ ಎದುರಿಸುತ್ತಿರುವವರಿಗೆ ಹಾಗೂ ಶಂಕಿತರಿಗೆ ಕೋರ್ಟ್‌ ಶಿಕ್ಷೆ ವಿಧಿಸುವವರೆಗೆ, ಅವರ ಹೆಸರು ಹಾಗೂ ಭಾವಚಿತ್ರಗಳನ್ನು ಬಹಿರಂಗಪಡಿಸಬಾರದು ಎಂದು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ಸಂಸ್ಥೆ (ಎಸಿಬಿ) ತನ್ನ ಅಧಿಕಾರಿಗಳಿಗೆ ಬುಧವಾರ ಸೂಚಿಸಿದೆ.

ಎಡಿಜಿ ಹೇಮಂತ ಪ್ರಿಯದರ್ಶಿ ಅವರು ಹೆಚ್ಚುವರಿಯಾಗಿ ಎಸಿಬಿ ಮುಖ್ಯಸ್ಥರಾಗಿ ಅಧಿಕಾರವಹಿಸಿಕೊಂಡ ಕೂಡಲೇ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

‘ಆರೋಪ ಎದುರಿಸುತ್ತಿರುವವರ ಹುದ್ದೆ, ಇಲಾಖೆ ಹೆಸರನ್ನು ಮಾತ್ರ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶಕ್ಕೆ ವಿರೋಧ ಪಕ್ಷ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಇಂಥ ಆದೇಶದ ಹಿಂದಿರುವ ಉದ್ದೇಶವೇನು ಎಂದು ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT