ಜೈಪುರ: ಲಂಚ ಪಡೆದ ಆರೋಪ ಎದುರಿಸುತ್ತಿರುವವರಿಗೆ ಹಾಗೂ ಶಂಕಿತರಿಗೆ ಕೋರ್ಟ್ ಶಿಕ್ಷೆ ವಿಧಿಸುವವರೆಗೆ, ಅವರ ಹೆಸರು ಹಾಗೂ ಭಾವಚಿತ್ರಗಳನ್ನು ಬಹಿರಂಗಪಡಿಸಬಾರದು ಎಂದು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ಸಂಸ್ಥೆ (ಎಸಿಬಿ) ತನ್ನ ಅಧಿಕಾರಿಗಳಿಗೆ ಬುಧವಾರ ಸೂಚಿಸಿದೆ.
ಎಡಿಜಿ ಹೇಮಂತ ಪ್ರಿಯದರ್ಶಿ ಅವರು ಹೆಚ್ಚುವರಿಯಾಗಿ ಎಸಿಬಿ ಮುಖ್ಯಸ್ಥರಾಗಿ ಅಧಿಕಾರವಹಿಸಿಕೊಂಡ ಕೂಡಲೇ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
‘ಆರೋಪ ಎದುರಿಸುತ್ತಿರುವವರ ಹುದ್ದೆ, ಇಲಾಖೆ ಹೆಸರನ್ನು ಮಾತ್ರ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶಕ್ಕೆ ವಿರೋಧ ಪಕ್ಷ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಇಂಥ ಆದೇಶದ ಹಿಂದಿರುವ ಉದ್ದೇಶವೇನು ಎಂದು ಪ್ರಶ್ನಿಸಿದೆ.