ರಿಯಾಜ್ ಅನ್ಸಾರಿ ಮತ್ತು ಗೌಸ್ ಮಹ್ಮದ್ ಎಂಬುವವರು ಪ್ರವಾದಿ ಮಹಮ್ಮದ್ ಅವರ ಅವಹೇಳನ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದರು ಎಂಬ ಕಾರಣಕ್ಕೆ ಟೈಲರ್ ಕನ್ಹಯ್ಯ ಅವರ ಶಿರಚ್ಛೇದ ಮಾಡಿದ್ದರು. ನಂತರ ಕನ್ಹಯ್ಯ ಹತ್ಯೆಯ ಹೊಣೆ ಹೊತ್ತುಕೊಂಡು, 'ಇದು ಇಸ್ಲಾಂಗೆ ಅವಮಾನ ಮಾಡಿದ್ದಕ್ಕೆ ಪ್ರತೀಕಾರ' ಎಂಬ ಹೇಳಿಕೆಯಿರುವ ವಿಡಿಯೊವನ್ನು ಆನ್ಲೈನ್ನಲ್ಲಿ ಬಿಡುಗಡೆ ಮಾಡಿದ್ದರು.