<p><strong>ಉದಯಪುರ: </strong>ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ರಾಜಸ್ಥಾನದ ಗೋಗುಂಡ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್ ಲಾಲ್ ಭೀಲ್ ವಿರುದ್ಧ ಸುಖರ್ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ.</p>.<p>ಮಧ್ಯಪ್ರದೇಶದ ಮೂಲದ 35 ವರ್ಷದ ಮಹಿಳೆಯೊಬ್ಬರು ‘ಶಾಸಕರು ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ, ಹಲವು ಬಾರಿ ಅತ್ಯಾಚಾರ ಮಾಡಿದ್ದಾರೆ‘ ಎಂದು ದೂರು ನೀಡಿದ್ದರು.</p>.<p><strong>ಓದಿ:</strong><a href="https://www.prajavani.net/india-news/haryana-farmers-getting-pro-farmer-slogans-printed-on-wedding-cards-802567.html" itemprop="url">ಹರಿಯಾಣದಲ್ಲಿ ಲಗ್ನ ಪತ್ರಿಕೆ ಮೇಲೆ ‘ರೈತ ಪರ ಘೋಷಣೆ‘</a></p>.<p>‘ಈ ಹಿನ್ನೆಲೆಯಲ್ಲಿ ಗುರುವಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ, ಅವರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ‘ ಎಂದು ಉದಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಪಚಾರ್ ಹೇಳಿದ್ದಾರೆ.</p>.<p>‘ದೂರು ನೀಡಿರುವ ಸಂತ್ರಸ್ತೆ ಹಾಗೂ ಶಾಸಕರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ವರ್ಷಗಳಿಂದ ಇವರಿಬ್ಬರೂ ಸಂಪರ್ಕದಲ್ಲಿದ್ದಾರೆ‘ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಈ ಕುರಿತು ಶಾಸಕರು ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉದಯಪುರ: </strong>ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ರಾಜಸ್ಥಾನದ ಗೋಗುಂಡ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್ ಲಾಲ್ ಭೀಲ್ ವಿರುದ್ಧ ಸುಖರ್ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ.</p>.<p>ಮಧ್ಯಪ್ರದೇಶದ ಮೂಲದ 35 ವರ್ಷದ ಮಹಿಳೆಯೊಬ್ಬರು ‘ಶಾಸಕರು ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ, ಹಲವು ಬಾರಿ ಅತ್ಯಾಚಾರ ಮಾಡಿದ್ದಾರೆ‘ ಎಂದು ದೂರು ನೀಡಿದ್ದರು.</p>.<p><strong>ಓದಿ:</strong><a href="https://www.prajavani.net/india-news/haryana-farmers-getting-pro-farmer-slogans-printed-on-wedding-cards-802567.html" itemprop="url">ಹರಿಯಾಣದಲ್ಲಿ ಲಗ್ನ ಪತ್ರಿಕೆ ಮೇಲೆ ‘ರೈತ ಪರ ಘೋಷಣೆ‘</a></p>.<p>‘ಈ ಹಿನ್ನೆಲೆಯಲ್ಲಿ ಗುರುವಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ, ಅವರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ‘ ಎಂದು ಉದಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಪಚಾರ್ ಹೇಳಿದ್ದಾರೆ.</p>.<p>‘ದೂರು ನೀಡಿರುವ ಸಂತ್ರಸ್ತೆ ಹಾಗೂ ಶಾಸಕರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ವರ್ಷಗಳಿಂದ ಇವರಿಬ್ಬರೂ ಸಂಪರ್ಕದಲ್ಲಿದ್ದಾರೆ‘ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಈ ಕುರಿತು ಶಾಸಕರು ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>