ಬಾರ್ಮೇರ್ ಜಿಲ್ಲೆಯ ಉದ್ಯಮಿ ಕಿಶೋರ್ ಸಿಂಗ್ ಕನೋದ್ ಎಂಬುವವರು ಇದೇ 21ರಂದು ತಮ್ಮ ಮಗಳಾದ ಅಂಜಲಿ ಕನ್ವಾರ್ ಅವರ ವಿವಾಹವನ್ನು ನೆರವೇರಿಸಿದ್ದರು. ಮದುವೆ ಸಂದರ್ಭದಲ್ಲಿ, ವರ ಪ್ರವೀಣ್ ಸಿಂಗ್ಗೆ ವರದಕ್ಷಿಣೆ ನೀಡಲು ಎಂದು ಕಿಶೋರ್ ಅವರು ₹75 ಲಕ್ಷವನ್ನು ತೆಗೆದಿರಿಸಿದ್ದರು. ಆದರೆ ಮದುವೆಯ ಮುನ್ನಾದಿನ ಅಂಜಲಿ, ‘ವರದಕ್ಷಿಣೆ ನೀಡಲು ತೆಗೆದಿರಿಸಿರುವ ಹಣವನ್ನು ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ನೀಡಿ’ ಎಂದು ತಮ್ಮ ತಂದೆಯನ್ನು ಕೇಳಿಕೊಂಡಿದ್ದಾರೆ. ಇದಕ್ಕೆ ಕಿಶೋರ್ ಸಹ ಸಮ್ಮತಿ ಸೂಚಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.