<p><strong>ಬಾರ್ಮೇರ್ (ರಾಜಸ್ಥಾನ):</strong> ಇಲ್ಲಿನ ವಧುವೊಬ್ಬರು ತಮ್ಮ ಮದುವೆಯಲ್ಲಿ ವರದಕ್ಷಿಣೆ ನೀಡಲು ಎಂದು ತೆಗೆದಿರಿಸಿದ್ದ ₹75 ಲಕ್ಷವನ್ನು ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣ ಮಾಡಲು ದೇಣಿಗೆ ನೀಡಿದ್ದಾರೆ ಎಂದು ದೈನಿಕ ಭಾಸ್ಕರ ಪತ್ರಿಕೆಯು ವರದಿ ಮಾಡಿದೆ. ಈ ವರದಿಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಧುವಿನ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.</p>.<p>ಬಾರ್ಮೇರ್ ಜಿಲ್ಲೆಯ ಉದ್ಯಮಿ ಕಿಶೋರ್ ಸಿಂಗ್ ಕನೋದ್ ಎಂಬುವವರು ಇದೇ 21ರಂದು ತಮ್ಮ ಮಗಳಾದ ಅಂಜಲಿ ಕನ್ವಾರ್ ಅವರ ವಿವಾಹವನ್ನು ನೆರವೇರಿಸಿದ್ದರು. ಮದುವೆ ಸಂದರ್ಭದಲ್ಲಿ, ವರ ಪ್ರವೀಣ್ ಸಿಂಗ್ಗೆ ವರದಕ್ಷಿಣೆ ನೀಡಲು ಎಂದು ಕಿಶೋರ್ ಅವರು ₹75 ಲಕ್ಷವನ್ನು ತೆಗೆದಿರಿಸಿದ್ದರು. ಆದರೆ ಮದುವೆಯ ಮುನ್ನಾದಿನ ಅಂಜಲಿ, ‘ವರದಕ್ಷಿಣೆ ನೀಡಲು ತೆಗೆದಿರಿಸಿರುವ ಹಣವನ್ನು ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ನೀಡಿ’ ಎಂದು ತಮ್ಮ ತಂದೆಯನ್ನು ಕೇಳಿಕೊಂಡಿದ್ದಾರೆ. ಇದಕ್ಕೆ ಕಿಶೋರ್ ಸಹ ಸಮ್ಮತಿ ಸೂಚಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.</p>.<p>ಮದುವೆಯ ದಿನ ಮಂಟಪದಲ್ಲಿಯೇ ಈ ಬಗ್ಗೆ ಕಿಶೋರ್ ಘೋಷಣೆ ಮಾಡಿದ್ದಾರೆ. ತಮ್ಮ ಮಗಳಿಗೆ ಖಾಲಿ ಚೆಕ್ ನೀಡಿ, ಎಷ್ಟು ದೇಣಿಗೆ ನೀಡಬೇಕೊ ಅದನ್ನು ಚೆಕ್ನಲ್ಲಿ ನಮೂದಿಸು ಎಂದು ಹೇಳಿದ್ದಾರೆ. ಅಂಜಲಿ ಆ ಚೆಕ್ನಲ್ಲಿ ₹75 ಲಕ್ಷ ನಮೂದಿಸಿದ್ದಾರೆ. ಆ ಚೆಕ್ ಅನ್ನು ತಾರಾತರ ಮಠದ ಮುಖ್ಯಸ್ಥರಿಗೆ ಮಂಟಪದಲ್ಲಿಯೇ ಹಸ್ತಾಂತರಿಸಲಾಗಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.</p>.<p>‘ನಾವು ನಿರ್ಮಿಸುತ್ತಿರುವ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಕಿಶೋರ್ ಅವರು ಈ ಮೊದಲೇ ₹1 ಕೋಟಿ ದೇಣಿಗೆ ನೀಡಿದ್ದರು. ಕಾಮಗಾರಿ ಪೂರ್ಣಗೊಳಿಸಲು ಇನ್ನೂ ₹50–75 ಲಕ್ಷದ ಅಗತ್ಯವಿತ್ತು. ಕಿಶೋರ್ ಅವರು ಈಗ ಅದನ್ನೂ ಒದಗಿಸಿದ್ದಾರೆ’ ಎಂದು ತಾರಾತರ ಮಠವು ಮಾಹಿತಿ ನೀಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾರ್ಮೇರ್ (ರಾಜಸ್ಥಾನ):</strong> ಇಲ್ಲಿನ ವಧುವೊಬ್ಬರು ತಮ್ಮ ಮದುವೆಯಲ್ಲಿ ವರದಕ್ಷಿಣೆ ನೀಡಲು ಎಂದು ತೆಗೆದಿರಿಸಿದ್ದ ₹75 ಲಕ್ಷವನ್ನು ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣ ಮಾಡಲು ದೇಣಿಗೆ ನೀಡಿದ್ದಾರೆ ಎಂದು ದೈನಿಕ ಭಾಸ್ಕರ ಪತ್ರಿಕೆಯು ವರದಿ ಮಾಡಿದೆ. ಈ ವರದಿಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಧುವಿನ ನಡೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.</p>.<p>ಬಾರ್ಮೇರ್ ಜಿಲ್ಲೆಯ ಉದ್ಯಮಿ ಕಿಶೋರ್ ಸಿಂಗ್ ಕನೋದ್ ಎಂಬುವವರು ಇದೇ 21ರಂದು ತಮ್ಮ ಮಗಳಾದ ಅಂಜಲಿ ಕನ್ವಾರ್ ಅವರ ವಿವಾಹವನ್ನು ನೆರವೇರಿಸಿದ್ದರು. ಮದುವೆ ಸಂದರ್ಭದಲ್ಲಿ, ವರ ಪ್ರವೀಣ್ ಸಿಂಗ್ಗೆ ವರದಕ್ಷಿಣೆ ನೀಡಲು ಎಂದು ಕಿಶೋರ್ ಅವರು ₹75 ಲಕ್ಷವನ್ನು ತೆಗೆದಿರಿಸಿದ್ದರು. ಆದರೆ ಮದುವೆಯ ಮುನ್ನಾದಿನ ಅಂಜಲಿ, ‘ವರದಕ್ಷಿಣೆ ನೀಡಲು ತೆಗೆದಿರಿಸಿರುವ ಹಣವನ್ನು ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ನೀಡಿ’ ಎಂದು ತಮ್ಮ ತಂದೆಯನ್ನು ಕೇಳಿಕೊಂಡಿದ್ದಾರೆ. ಇದಕ್ಕೆ ಕಿಶೋರ್ ಸಹ ಸಮ್ಮತಿ ಸೂಚಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.</p>.<p>ಮದುವೆಯ ದಿನ ಮಂಟಪದಲ್ಲಿಯೇ ಈ ಬಗ್ಗೆ ಕಿಶೋರ್ ಘೋಷಣೆ ಮಾಡಿದ್ದಾರೆ. ತಮ್ಮ ಮಗಳಿಗೆ ಖಾಲಿ ಚೆಕ್ ನೀಡಿ, ಎಷ್ಟು ದೇಣಿಗೆ ನೀಡಬೇಕೊ ಅದನ್ನು ಚೆಕ್ನಲ್ಲಿ ನಮೂದಿಸು ಎಂದು ಹೇಳಿದ್ದಾರೆ. ಅಂಜಲಿ ಆ ಚೆಕ್ನಲ್ಲಿ ₹75 ಲಕ್ಷ ನಮೂದಿಸಿದ್ದಾರೆ. ಆ ಚೆಕ್ ಅನ್ನು ತಾರಾತರ ಮಠದ ಮುಖ್ಯಸ್ಥರಿಗೆ ಮಂಟಪದಲ್ಲಿಯೇ ಹಸ್ತಾಂತರಿಸಲಾಗಿದೆ ಎಂದು ವರದಿಯಲ್ಲಿ ವಿವರಿಸಲಾಗಿದೆ.</p>.<p>‘ನಾವು ನಿರ್ಮಿಸುತ್ತಿರುವ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಕಿಶೋರ್ ಅವರು ಈ ಮೊದಲೇ ₹1 ಕೋಟಿ ದೇಣಿಗೆ ನೀಡಿದ್ದರು. ಕಾಮಗಾರಿ ಪೂರ್ಣಗೊಳಿಸಲು ಇನ್ನೂ ₹50–75 ಲಕ್ಷದ ಅಗತ್ಯವಿತ್ತು. ಕಿಶೋರ್ ಅವರು ಈಗ ಅದನ್ನೂ ಒದಗಿಸಿದ್ದಾರೆ’ ಎಂದು ತಾರಾತರ ಮಠವು ಮಾಹಿತಿ ನೀಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>