ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಾರಾತ್ಮಕ ಸಂದೇಶ ರವಾನಿಸಿದೆ ರಾಜಸ್ಥಾನ ಸಂಪುಟ ಪುನರ್‌ರಚನೆ: ಸಚಿನ್‌ ಪೈಲಟ್‌

Last Updated 21 ನವೆಂಬರ್ 2021, 6:53 IST
ಅಕ್ಷರ ಗಾತ್ರ

ಜೈಪುರ: ಸಂಪುಟ ಪುನರ್ ರಚನೆಯು ರಾಜಸ್ಥಾನ ರಾಜ್ಯದಾದ್ಯಂತ ಸಕಾರಾತ್ಮಕ ಸಂದೇಶವನ್ನು ಸಾರಿದೆ ಎಂದು ಕಾಂಗ್ರೆಸ್‌ ನಾಯಕ ಮತ್ತು ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಹೇಳಿದ್ದಾರೆ.

ಪಕ್ಷದಲ್ಲಿ ವಿವಿಧ ಬಣಗಳಿವೆ ಎಂಬುದನ್ನು ಅವರು ಅಲ್ಲಗಳೆದಿದ್ದಾರೆ. ಉಪ ಮುಖ್ಯಮಂತ್ರಿಯಾಗಿದ್ದ ಅವರನ್ನು ಕಳೆದ ವರ್ಷ ಬಂಡಾಯ ಚಟುವಟಿಕೆಗಳ ಕಾರಣ ವಜಾ ಮಾಡಲಾಗಿತ್ತು.

ಸಂಪುಟದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಜನರ ಸಂಖ್ಯೆ ಹೆಚ್ಚಿಸಬೇಕೆಂಬ ತಮ್ಮ ಬೇಡಿಕೆಗೆ ಮನ್ನಣೆ ದೊರಕಿದೆ. ತಾವು ಎತ್ತಿದ್ದ ಇತರ ಕೆಲವು ಬೇಡಿಕೆಗಳೂ ಈಡೇರಿದ್ದು ತಮಗೆ ಸಂತಸವಾಗಿದೆ ಎಂದು ಹೇಳಿದ್ದಾರೆ.

‘ಸಂಪುಟದಲ್ಲಿ ಪರಿಶಿಷ್ಟ ಜಾತಿಯ ನಾಲ್ವರು ಸಚಿವರನ್ನು ಸೇರಿಸಲಾಗುತ್ತಿದೆ. ಅಲ್ಲದೆ ಬುಡಕಟ್ಟು ಜನಾಂಗ ಮತ್ತು ಮಹಿಳೆಯರ ಪ್ರಾತಿನಿಧ್ಯ ಕೂಡ ಹೆಚ್ಚಾಗಿದೆ. ಇದು ಅಗತ್ಯವಾಗಿತ್ತು’ ಎಂದು ಅವರು ವರದಿಗಾರರಿಗೆ ತಿಳಿಸಿದ್ದಾರೆ.ಪಕ್ಷದಲ್ಲಿ ಬಣಗಳು ಇಲ್ಲ. 2023ರ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT