<p><strong>ಜೈಪುರ: </strong>ರಾಜಸ್ಥಾನದ ಬಾರಾನ್ ಜಿಲ್ಲೆಯಲ್ಲಿ ನಡೆದ ಘಟನೆಗೂ ಉತ್ತರಪ್ರದೇಶದ ಹತ್ರಾಸ್ನ ಸಾಮೂಹಿಕ ಅತ್ಯಾಚಾರಕ್ಕೂ ಹೋಲಿಕೆ ಮಾಡುವುದು ಸರಿಯಲ್ಲ. ಈ ರೀತಿಯ ಹೋಲಿಕೆ ಜನರನ್ನು ತಪ್ಪು ದಾರಿಗೆ ಎಳೆಯುತ್ತದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.</p>.<p>ಬಾರಾನ್ ಜಿಲ್ಲೆಯಿಂದ ಸೆಪ್ಟೆಂಬರ್ 19ರಂದು ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದರು. ಇವರು ಸೋದರಿಯರು. ಸೆಪ್ಟೆಂಬರ್ 22ರಂದು ಈ ಸೋದರಿಯರನ್ನು ಕೋಟಾದಲ್ಲಿ ಪತ್ತೆ ಮಾಡಲಾಯಿತು ಎಂದು ಪೊಲೀಸರು ಹೇಳಿದ್ದಾರೆ.</p>.<p>ಬಾಲಕಿಯರ ಹೇಳಿಕೆಗಳನ್ನು ಪಡೆದು ಅವರನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಗಳ ಪ್ರಕಾರ ದೃಢಪಟ್ಟಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿ ಗೆಹ್ಲೋಟ್ ಹೇಳಿದ್ದಾರೆ.</p>.<p>‘ಹತ್ರಾಸ್ ಪ್ರಕರಣ ಖಂಡನೀಯ. ಆದರೆ ಬಾರನ್ ಜಿಲ್ಲೆಯ ಘಟನೆಯನ್ನು ವಿರೋಧ ಪಕ್ಷ ಮತ್ತು ಮಾಧ್ಯಮದ ಹಲವರು ಹತ್ರಾಸ್ ಪ್ರಕರಣಕ್ಕೆ ಹೋಲಿಸುತ್ತಿದ್ದಾರೆ. ಇದು ದುರದೃಷ್ಟಕರ‘ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>‘ಹುಡುಗರ ಜತೆ ತಾವೇ ಹೋಗಿದ್ದಾಗಿ ಬಾರನ್ನ ಬಾಲಕಿಯರು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ’ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.</p>.<p>‘ಹುಡುಗರೂ ಅಪ್ರಾಪ್ತ ವಯಸ್ಸಿನವರು. ಬಾಲಕಿಯರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ತನಿಖೆ ಮುಂದುವರಿದಿದೆ‘ ಎಂದು ಹೇಳಿದ್ದಾರೆ.</p>.<p>ಈ ಮಧ್ಯೆ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ಬಿಜೆಪಿ ವಕ್ತಾರ ರಾಮ್ಲಾಲ್ ಶರ್ಮ ಅವರು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>ರಾಜಸ್ಥಾನದ ಬಾರಾನ್ ಜಿಲ್ಲೆಯಲ್ಲಿ ನಡೆದ ಘಟನೆಗೂ ಉತ್ತರಪ್ರದೇಶದ ಹತ್ರಾಸ್ನ ಸಾಮೂಹಿಕ ಅತ್ಯಾಚಾರಕ್ಕೂ ಹೋಲಿಕೆ ಮಾಡುವುದು ಸರಿಯಲ್ಲ. ಈ ರೀತಿಯ ಹೋಲಿಕೆ ಜನರನ್ನು ತಪ್ಪು ದಾರಿಗೆ ಎಳೆಯುತ್ತದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.</p>.<p>ಬಾರಾನ್ ಜಿಲ್ಲೆಯಿಂದ ಸೆಪ್ಟೆಂಬರ್ 19ರಂದು ಇಬ್ಬರು ಬಾಲಕಿಯರು ನಾಪತ್ತೆಯಾಗಿದ್ದರು. ಇವರು ಸೋದರಿಯರು. ಸೆಪ್ಟೆಂಬರ್ 22ರಂದು ಈ ಸೋದರಿಯರನ್ನು ಕೋಟಾದಲ್ಲಿ ಪತ್ತೆ ಮಾಡಲಾಯಿತು ಎಂದು ಪೊಲೀಸರು ಹೇಳಿದ್ದಾರೆ.</p>.<p>ಬಾಲಕಿಯರ ಹೇಳಿಕೆಗಳನ್ನು ಪಡೆದು ಅವರನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಅತ್ಯಾಚಾರ ನಡೆದಿರುವುದು ವೈದ್ಯಕೀಯ ವರದಿಗಳ ಪ್ರಕಾರ ದೃಢಪಟ್ಟಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿ ಗೆಹ್ಲೋಟ್ ಹೇಳಿದ್ದಾರೆ.</p>.<p>‘ಹತ್ರಾಸ್ ಪ್ರಕರಣ ಖಂಡನೀಯ. ಆದರೆ ಬಾರನ್ ಜಿಲ್ಲೆಯ ಘಟನೆಯನ್ನು ವಿರೋಧ ಪಕ್ಷ ಮತ್ತು ಮಾಧ್ಯಮದ ಹಲವರು ಹತ್ರಾಸ್ ಪ್ರಕರಣಕ್ಕೆ ಹೋಲಿಸುತ್ತಿದ್ದಾರೆ. ಇದು ದುರದೃಷ್ಟಕರ‘ ಎಂದು ಪ್ರತಿಕ್ರಿಯಿಸಿದ್ದಾರೆ.</p>.<p>‘ಹುಡುಗರ ಜತೆ ತಾವೇ ಹೋಗಿದ್ದಾಗಿ ಬಾರನ್ನ ಬಾಲಕಿಯರು ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ’ ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.</p>.<p>‘ಹುಡುಗರೂ ಅಪ್ರಾಪ್ತ ವಯಸ್ಸಿನವರು. ಬಾಲಕಿಯರ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ತನಿಖೆ ಮುಂದುವರಿದಿದೆ‘ ಎಂದು ಹೇಳಿದ್ದಾರೆ.</p>.<p>ಈ ಮಧ್ಯೆ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ಬಿಜೆಪಿ ವಕ್ತಾರ ರಾಮ್ಲಾಲ್ ಶರ್ಮ ಅವರು ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>