<p><strong>ಜೈಪುರ:</strong> ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಈ ಬಾರಿ ಹಬ್ಬದ ಅವಧಿಯಲ್ಲಿ ಪಟಾಕಿ ಮಾರಾಟ ನಿಷೇಧಿಸಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ.</p>.<p>ಈ ಸವಾಲಿನ ಸಮಯದಲ್ಲಿ ಜನರ ಜೀವ ಉಳಿಸುವುದು ಸರ್ಕಾರಕ್ಕೆ ಬಹು ಮುಖ್ಯವಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.</p>.<p>ಶಾಲೆ ಮತ್ತು ಕಾಲೇಜುಗಳನ್ನು ನವೆಂಬರ್ 16ರ ವರೆಗೂ ತೆರೆಯದೇ ಇರಲು ನಿರ್ಧರಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.</p>.<p>ಕೊರೊನಾ ವೈರಸ್ ಬಿಕ್ಕಟ್ಟು, ‘ನೊ ಮಾಸ್ಕ್–ನೊ ಎಂಟ್ರಿ’ ಮತ್ತು ‘ವಾರ್ ಫಾರ್ ದಿ ಪ್ಯೂರ್’ ಅಭಿಯಾನಗಳ ಕುರಿತು ಅವರು ಪರಾಮರ್ಶೆ ನಡೆಸಿದ್ದಾರೆ. ‘ಅನ್ಲಾಕ್–6’ರ ಮಾರ್ಗಸೂಚಿ ಬಗ್ಗೆಯೂ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.</p>.<p>ಪಟಾಕಿ ಮಾರಾಟ ಮತ್ತು ಫಿಟ್ನೆಸ್ ಪ್ರಮಾಣಪತ್ರವಿಲ್ಲದೆ ಸಂಚರಿಸುವ ವಾಹನಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಇಂಥ ಸಂದರ್ಭದಲ್ಲಿ ಜನರು ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಬಾರದು ಎಂದು ಗೆಹ್ಲೋಟ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಈ ಬಾರಿ ಹಬ್ಬದ ಅವಧಿಯಲ್ಲಿ ಪಟಾಕಿ ಮಾರಾಟ ನಿಷೇಧಿಸಲು ರಾಜಸ್ಥಾನ ಸರ್ಕಾರ ನಿರ್ಧರಿಸಿದೆ.</p>.<p>ಈ ಸವಾಲಿನ ಸಮಯದಲ್ಲಿ ಜನರ ಜೀವ ಉಳಿಸುವುದು ಸರ್ಕಾರಕ್ಕೆ ಬಹು ಮುಖ್ಯವಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.</p>.<p>ಶಾಲೆ ಮತ್ತು ಕಾಲೇಜುಗಳನ್ನು ನವೆಂಬರ್ 16ರ ವರೆಗೂ ತೆರೆಯದೇ ಇರಲು ನಿರ್ಧರಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.</p>.<p>ಕೊರೊನಾ ವೈರಸ್ ಬಿಕ್ಕಟ್ಟು, ‘ನೊ ಮಾಸ್ಕ್–ನೊ ಎಂಟ್ರಿ’ ಮತ್ತು ‘ವಾರ್ ಫಾರ್ ದಿ ಪ್ಯೂರ್’ ಅಭಿಯಾನಗಳ ಕುರಿತು ಅವರು ಪರಾಮರ್ಶೆ ನಡೆಸಿದ್ದಾರೆ. ‘ಅನ್ಲಾಕ್–6’ರ ಮಾರ್ಗಸೂಚಿ ಬಗ್ಗೆಯೂ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.</p>.<p>ಪಟಾಕಿ ಮಾರಾಟ ಮತ್ತು ಫಿಟ್ನೆಸ್ ಪ್ರಮಾಣಪತ್ರವಿಲ್ಲದೆ ಸಂಚರಿಸುವ ವಾಹನಗಳ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಇಂಥ ಸಂದರ್ಭದಲ್ಲಿ ಜನರು ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಬಾರದು ಎಂದು ಗೆಹ್ಲೋಟ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>