ಸಂವಿಧಾನದ 9ನೇ ಶೆಡ್ಯೂಲ್ ಪ್ರಕಾರ ರಾಜ್ಯ ಸರ್ಕಾರವು ಗುಜ್ಜಾರ್ ಸಮುದಾಯಕ್ಕೆ ಮೀಸಲಾತಿ ನೀಡಬೇಕು. ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಬಾಕಿ ಉಳಿದಿರುವ ನೇಮಕಾತಿ ಪ್ರಕ್ರಿಯೆಯಲ್ಲಿ, ಅತ್ಯಂತ ಹಿಂದುಳಿದ ವರ್ಗಗಳಿಗೆ ಶೇ 5ರ ಕೋಟಾ ಸೌಲಭ್ಯವನ್ನು ನೀಡಬೇಕು ಎಂದು ಒತ್ತಾಯಿಸಿ ಗುಜ್ಜಾರ್ ಆರಕ್ಷಣ್ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತ್ತು. ನವೆಂಬರ್ 1 ರಂದು ಆರಂಭವಾಗಿದ್ದ ಈ ಪ್ರತಿಭಟನೆ ನಿನ್ನೆಯವರೆಗೂ(ನ.11) ಮುಂದುರಿದಿತ್ತು.