ನವದೆಹಲಿ:ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಜೊತೆಗೆ ಬಿ.ಎಸ್.ಪಿಯ ಆರು ಮಂದಿ ಶಾಸಕರು ಕಳೆದ ವರ್ಷ ವಿಲೀನಗೊಂಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಂಗಳವಾರ ಕೈಗೆತ್ತಿಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಬಿ.ಎಸ್.ಪಿ ಶಾಸಕರು ಕಾಂಗ್ರೆಸ್ ಸದಸ್ಯರಾಗಿ ಕಾರ್ಯನಿರ್ವಹಿಸುವುದಕ್ಕೆ ತಡೆ ನೀಡಬೇಕು ಎಂದು ಕೋರಿದ್ದ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ತಳ್ಳಿಹಾಕಿತ್ತು. ಇದನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಸುಪ್ರೀಂ ಕೋರ್ಟ್ ನ ಮೊರೆ ಹೋಗಿದ್ದರು.
ಆರು ಮಂದಿ ಪ್ರತ್ಯೇಕವಾಗಿ ಸಲ್ಲಿಸಿರುವ ಅರ್ಜಿ ಹಾಗೂ ಬಿಜೆಪಿ ಸಂಸದ ಮದನ್ ದಿಲಾವರ್ ಅವರು ಸಲ್ಲಿಸಿರುವ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ಪೀಠ ಸೋಮವಾರ ತಿಳಿಸಿತು.