ಕೈಕುಲುಕಿದ ಗೆಹ್ಲೋಟ್–ಸಚಿನ್: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಾಯಕತ್ವವನ್ನು ಬಹಿರಂಗವಾಗಿಯೇ ಟೀಕಿಸಿ ಬಂಡಾಯವೆದ್ದಿದ್ದ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ಮತ್ತೆ ಕಾಂಗ್ರೆಸ್ ತೆಕ್ಕೆಗೆ ಮರಳಿದ್ದು, ಗುರುವಾರ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ತಿಂಗಳ ಬಳಿಕ ಪರಸ್ಪರ ಭೇಟಿಯಾದರು. ಹಿರಿಯ ನಾಯಕರ ಸಮ್ಮುಖದಲ್ಲಿ ಕೈಕುಲುಕಿದ ಗೆಹ್ಲೋಟ್ ಹಾಗೂ ಪೈಲಟ್ ವಿಜಯದ ಸಂಕೇತ ತೋರಿಸಿ ಕೈಬೀಸಿದರು.