<p><strong>ನವದೆಹಲಿ</strong>: ರಾಜಸ್ಥಾನದ ರಾಮಗಡವಿಸ್ಧಾರ್ ಅಭಯಾರಣ್ಯವನ್ನು ಭಾರತದ 52 ನೇ ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವನ್ನಾಗಿ ಘೋಷಣೆ ಮಾಡಲಾಗಿದೆ.</p>.<p>ಸೋಮವಾರ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರು ಈ ಘೋಷಣೆ ಮಾಡಿದ್ದಾರೆ.ರಾಜಸ್ಥಾನದಲ್ಲಿನ ರಣತಂಬೂರ್, ಸಾರಿಸ್ಕಾ ಹಾಗೂ ಮುಕುಂಧರಾ ಹುಲಿ ಸಂರಕ್ಷಿತಾರಣ್ಯದ ನಂತರ ರಾಮಗಡವಿಸ್ಧಾರ್ ಹುಲಿ ಸಂರಕ್ಷಿತಾರಣ್ಯ ನಾಲ್ಕನೇಯದಾಗಿದೆ.</p>.<p>ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ವನ್ಯಜೀವಿಗಳನ್ನು, ಪರಿಸರವನ್ನು ಹಾಗೂ ವನ್ಯಸಂಪತ್ತನ್ನು ಉಳಿಸಲು ಕಟಿಬದ್ಧವಾಗಿದ್ದು, ಈ ನಿಟ್ಟಿನಲ್ಲಿರಾಮಗಡವಿಸ್ಧಾರ್ ಹುಲಿ ಸಂರಕ್ಷಿತಾರಣ್ಯ ಮಹತ್ವದ ಪಾತ್ರ ವಹಿಸಲಿದೆ ಎಂದಿದ್ದಾರೆ.</p>.<p>ರಾಮಗಡವಿಸ್ಧಾರ್ ಹುಲಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತಾರಣ್ಯವನ್ನಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ರಾಷ್ಟ್ರಿಯ ಹುಲಿ ಸಂರಕ್ಷಣಾ ಪ್ರಾಧಿಕಾರಕಳೆದ ವರ್ಷ ಜುಲೈ 5 ರಂದು ತಾತ್ವಿಕ ಒಪ್ಪಿಗೆ ಸೂಚಿಸಿತ್ತು.</p>.<p>ಈ ನಿರ್ಧಾರದಿಂದ ಭೀಮ್ಲಾತ್ ಹಾಗೂ ರಾಮಗಡವಿಭಾಗದಲ್ಲಿ ಪರಿಸರ ಪ್ರವಾಸೋಧ್ಯಮ ಉತ್ತೇಜನಗೊಳ್ಳಲಿದೆ ಎಂದುಭೂಪೇಂದ್ರ ಯಾದವ್ ತಿಳಿಸಿದ್ದಾರೆ.2019 ರ ಹುಲಿ ಗಣತಿ ವರದಿ ಪ್ರಕಾರ ಭಾರತದಲ್ಲಿ 2,967 ಹುಲಿಗಳು ಇರುವುದು ಕಂಡು ಬಂದಿದೆ.</p>.<p><a href="https://www.prajavani.net/india-news/in-a-first-madras-high-court-hears-case-through-whatsapp-937233.html" itemprop="url">ಮದುವೆಯಲ್ಲಿದ್ದ ನ್ಯಾಯಮೂರ್ತಿ: ವಾಟ್ಸ್ಆ್ಯಪ್ನಲ್ಲೇ ನಡೆಯಿತು ತುರ್ತು ವಿಚಾರಣೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜಸ್ಥಾನದ ರಾಮಗಡವಿಸ್ಧಾರ್ ಅಭಯಾರಣ್ಯವನ್ನು ಭಾರತದ 52 ನೇ ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವನ್ನಾಗಿ ಘೋಷಣೆ ಮಾಡಲಾಗಿದೆ.</p>.<p>ಸೋಮವಾರ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರು ಈ ಘೋಷಣೆ ಮಾಡಿದ್ದಾರೆ.ರಾಜಸ್ಥಾನದಲ್ಲಿನ ರಣತಂಬೂರ್, ಸಾರಿಸ್ಕಾ ಹಾಗೂ ಮುಕುಂಧರಾ ಹುಲಿ ಸಂರಕ್ಷಿತಾರಣ್ಯದ ನಂತರ ರಾಮಗಡವಿಸ್ಧಾರ್ ಹುಲಿ ಸಂರಕ್ಷಿತಾರಣ್ಯ ನಾಲ್ಕನೇಯದಾಗಿದೆ.</p>.<p>ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ವನ್ಯಜೀವಿಗಳನ್ನು, ಪರಿಸರವನ್ನು ಹಾಗೂ ವನ್ಯಸಂಪತ್ತನ್ನು ಉಳಿಸಲು ಕಟಿಬದ್ಧವಾಗಿದ್ದು, ಈ ನಿಟ್ಟಿನಲ್ಲಿರಾಮಗಡವಿಸ್ಧಾರ್ ಹುಲಿ ಸಂರಕ್ಷಿತಾರಣ್ಯ ಮಹತ್ವದ ಪಾತ್ರ ವಹಿಸಲಿದೆ ಎಂದಿದ್ದಾರೆ.</p>.<p>ರಾಮಗಡವಿಸ್ಧಾರ್ ಹುಲಿ ಅಭಯಾರಣ್ಯವನ್ನು ಹುಲಿ ಸಂರಕ್ಷಿತಾರಣ್ಯವನ್ನಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ರಾಷ್ಟ್ರಿಯ ಹುಲಿ ಸಂರಕ್ಷಣಾ ಪ್ರಾಧಿಕಾರಕಳೆದ ವರ್ಷ ಜುಲೈ 5 ರಂದು ತಾತ್ವಿಕ ಒಪ್ಪಿಗೆ ಸೂಚಿಸಿತ್ತು.</p>.<p>ಈ ನಿರ್ಧಾರದಿಂದ ಭೀಮ್ಲಾತ್ ಹಾಗೂ ರಾಮಗಡವಿಭಾಗದಲ್ಲಿ ಪರಿಸರ ಪ್ರವಾಸೋಧ್ಯಮ ಉತ್ತೇಜನಗೊಳ್ಳಲಿದೆ ಎಂದುಭೂಪೇಂದ್ರ ಯಾದವ್ ತಿಳಿಸಿದ್ದಾರೆ.2019 ರ ಹುಲಿ ಗಣತಿ ವರದಿ ಪ್ರಕಾರ ಭಾರತದಲ್ಲಿ 2,967 ಹುಲಿಗಳು ಇರುವುದು ಕಂಡು ಬಂದಿದೆ.</p>.<p><a href="https://www.prajavani.net/india-news/in-a-first-madras-high-court-hears-case-through-whatsapp-937233.html" itemprop="url">ಮದುವೆಯಲ್ಲಿದ್ದ ನ್ಯಾಯಮೂರ್ತಿ: ವಾಟ್ಸ್ಆ್ಯಪ್ನಲ್ಲೇ ನಡೆಯಿತು ತುರ್ತು ವಿಚಾರಣೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>