<p><strong>ಜೈಪುರ</strong>: ಉದಯಪುರದಲ್ಲಿ ಮಂಗಳವಾರ(ಜೂನ್ 29) ಹತ್ಯೆಯಾದ ಟೈಲರ್ ಕನ್ಹಯ್ಯ ಲಾಲ್ ಅವರು ತಮಗೆ ಜೀವ ಬೆದರಿಕೆ ಇರುವುದಾಗಿ ಜೂನ್ 15ರಂದೇ ಲಿಖಿತ ದೂರು ನೀಡಿದ್ದರೆಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಜೂನ್ 11 ರಂದು, ವಿವಾದಾತ್ಮಕ ಸಾಮಾಜಿಕ ಮಾಧ್ಯಮ ಪೋಸ್ಟ್ ಕುರಿತು ಕನ್ಹಯ್ಯ ಲಾಲ್ ವಿರುದ್ಧ ನೆರೆಮನೆಯ ನಾಜಿಮ್ ಪ್ರಕರಣ ದಾಖಲಿಸಿದ್ದರು. ಈ ದೂರಿಗೆ ಸಂಬಂಧಿಸಿದಂತೆ ಕನ್ಹಯ್ಯ ಲಾಲ್ ಅವರನ್ನು ಬಂಧಿಸಲಾಗಿತ್ತು.</p>.<p>ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ಕನ್ಹಯ್ಯ ಲಾಲ್ ಅವರು ಜೂನ್ 15 ರಂದು ಪೊಲೀಸರಿಗೆ ಲಿಖಿತ ದೂರು ನೀಡಿದ್ದರು. ನಾಜಿಮ್ ಮತ್ತು ಇತರರಿಂದ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ತಮಗೆ ರಕ್ಷಣೆ ನೀಡಬೇಕೆಂದು ಪೋಲಿಸರಲ್ಲಿ ಕನ್ಹಯ್ಯ ಲಾಲ್ ಕೇಳಿಕೊಂಡಿದ್ದರು.</p>.<p>‘ತಮ್ಮ ಸಮುದಾಯದ ಸಾಮೂಹಿಕ ಮಾಧ್ಯಮ ಗ್ರೂಪ್ಗಳಲ್ಲಿ ನನ್ನ ಫೋಟೋವನ್ನು ಆರೋಪಿಗಳು ಹಂಚಿಕೊಂಡಿದ್ದಾರೆ. ನನ್ನನ್ನು ಎಲ್ಲಾದರೂ ಕಂಡರೆ ಅಥವಾ ಅಂಗಡಿ ತೆರೆದರೆ ಕೊಲ್ಲಬೇಕು ಎಂಬ ಸಂದೇಶಗಳನ್ನು ಹರಿಬಿಟ್ಟಿದ್ದಾರೆ’ ಎಂದು ಕನ್ಹಯ್ಯ ಲಾಲ್ ದೂರಿದ್ದರು.</p>.<p>‘ನಾಜಿಮ್ ಮತ್ತು ಇತರ ಐವರು ನನ್ನ ಅಂಗಡಿಯ ಸುತ್ತ ಸಂಶಯಾಸ್ಪದವಾಗಿ ಓಡಾಟ ನಡೆಸುತ್ತಿದ್ದಾರೆ. ನನಗೆ ಅಂಗಡಿ ತೆರೆಯಲು ಅವಕಾಶ ನೀಡುತ್ತಿಲ್ಲ. ಅವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ’ ಎಂದು ದೂರಿನಲ್ಲಿ ತಿಳಿಸಿದ್ದರು.</p>.<p>‘ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದ ಮಗ ಅಚಾತುರ್ಯದಿಂದ ಫೇಸ್ಬುಕ್ನಲ್ಲಿ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿದ್ದಾನೆ. ಈ ಬಗ್ಗೆ ನನಗೆ ಗೊತ್ತಿರಲಿಲ್ಲ. ತನಗೆ ಫೋನ್ ಬಳಸುವುದೂ ತಿಳಿದಿಲ್ಲ’ ಎಂದೂ ಕನ್ಹಯ್ಯ ದೂರಿನಲ್ಲಿ ಬರೆದಿದ್ದರು. ಆದರೆ, ಪೊಲೀಸರು ನಾಜಿಮ್ ಮತ್ತು ಕನ್ಹಯ್ಯ ನಡುವೆ ಮಧ್ಯಸ್ಥಿಕೆ ವಹಿಸಿ ವಿಚಾರವನ್ನು ಇತ್ಯರ್ಥಗೊಳಿಸಿದ್ದರೆಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಪ್ರಕಟಿಸಿದ್ದಕ್ಕಾಗಿ (ಮಂಗಳವಾರ) ಟೈಲರ್ ಕನ್ಹಯ್ಯ ಲಾಲ್ ಅವರ ಶಿರಚ್ಛೇದ ಮಾಡಲಾಗಿತ್ತು.</p>.<p><strong>ಇವನ್ನೂ ಓದಿ:</strong></p>.<p><strong><a href="https://www.prajavani.net/india-news/rajasthan-udaipur-tense-after-murder-protests-break-out-in-city-over-killing-of-hindu-man-internet-949664.html" itemprop="url" target="_blank">ರಾಜಸ್ಥಾನ: ಭೀಕರ ಹತ್ಯೆ ಬಳಿಕ ಭುಗಿಲೆದ್ದ ಪ್ರತಿಭಟನೆ, ಇಂಟರ್ನೆಟ್ ಸೇವೆ ಸ್ಥಗಿತ</a></strong></p>.<p><strong><a href="https://www.prajavani.net/india-news/rajasthan-udaipur-murder-case-tailor-killed-in-udaipur-over-social-posts-2-accused-arrested-949690.html" itemprop="url" target="_blank">ರಾಜಸ್ಥಾನ: ನೂಪುರ್ ಬೆಂಬಲಿಸಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ಹತ್ಯೆ, ಇಬ್ಬರ ಬಂಧನ</a></strong></p>.<p><strong><a href="https://www.prajavani.net/india-news/rahul-gandhi-and-priyanka-gandhi-vadra-has-condemn-the-gruesome-murder-in-udaipur-rajasthan-949696.html" itemprop="url" target="_blank">ರಾಜಸ್ಥಾನ: ಉದಯಪುರ ಹತ್ಯೆಗೆ ಕಾಂಗ್ರೆಸ್ ನಾಯಕ ರಾಹುಲ್, ಪ್ರಿಯಾಂಕಾ ತೀವ್ರ ಖಂಡನೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ಉದಯಪುರದಲ್ಲಿ ಮಂಗಳವಾರ(ಜೂನ್ 29) ಹತ್ಯೆಯಾದ ಟೈಲರ್ ಕನ್ಹಯ್ಯ ಲಾಲ್ ಅವರು ತಮಗೆ ಜೀವ ಬೆದರಿಕೆ ಇರುವುದಾಗಿ ಜೂನ್ 15ರಂದೇ ಲಿಖಿತ ದೂರು ನೀಡಿದ್ದರೆಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಜೂನ್ 11 ರಂದು, ವಿವಾದಾತ್ಮಕ ಸಾಮಾಜಿಕ ಮಾಧ್ಯಮ ಪೋಸ್ಟ್ ಕುರಿತು ಕನ್ಹಯ್ಯ ಲಾಲ್ ವಿರುದ್ಧ ನೆರೆಮನೆಯ ನಾಜಿಮ್ ಪ್ರಕರಣ ದಾಖಲಿಸಿದ್ದರು. ಈ ದೂರಿಗೆ ಸಂಬಂಧಿಸಿದಂತೆ ಕನ್ಹಯ್ಯ ಲಾಲ್ ಅವರನ್ನು ಬಂಧಿಸಲಾಗಿತ್ತು.</p>.<p>ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ಕನ್ಹಯ್ಯ ಲಾಲ್ ಅವರು ಜೂನ್ 15 ರಂದು ಪೊಲೀಸರಿಗೆ ಲಿಖಿತ ದೂರು ನೀಡಿದ್ದರು. ನಾಜಿಮ್ ಮತ್ತು ಇತರರಿಂದ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ತಮಗೆ ರಕ್ಷಣೆ ನೀಡಬೇಕೆಂದು ಪೋಲಿಸರಲ್ಲಿ ಕನ್ಹಯ್ಯ ಲಾಲ್ ಕೇಳಿಕೊಂಡಿದ್ದರು.</p>.<p>‘ತಮ್ಮ ಸಮುದಾಯದ ಸಾಮೂಹಿಕ ಮಾಧ್ಯಮ ಗ್ರೂಪ್ಗಳಲ್ಲಿ ನನ್ನ ಫೋಟೋವನ್ನು ಆರೋಪಿಗಳು ಹಂಚಿಕೊಂಡಿದ್ದಾರೆ. ನನ್ನನ್ನು ಎಲ್ಲಾದರೂ ಕಂಡರೆ ಅಥವಾ ಅಂಗಡಿ ತೆರೆದರೆ ಕೊಲ್ಲಬೇಕು ಎಂಬ ಸಂದೇಶಗಳನ್ನು ಹರಿಬಿಟ್ಟಿದ್ದಾರೆ’ ಎಂದು ಕನ್ಹಯ್ಯ ಲಾಲ್ ದೂರಿದ್ದರು.</p>.<p>‘ನಾಜಿಮ್ ಮತ್ತು ಇತರ ಐವರು ನನ್ನ ಅಂಗಡಿಯ ಸುತ್ತ ಸಂಶಯಾಸ್ಪದವಾಗಿ ಓಡಾಟ ನಡೆಸುತ್ತಿದ್ದಾರೆ. ನನಗೆ ಅಂಗಡಿ ತೆರೆಯಲು ಅವಕಾಶ ನೀಡುತ್ತಿಲ್ಲ. ಅವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ ಎಂಬುದು ನನಗೆ ತಿಳಿದಿದೆ’ ಎಂದು ದೂರಿನಲ್ಲಿ ತಿಳಿಸಿದ್ದರು.</p>.<p>‘ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದ ಮಗ ಅಚಾತುರ್ಯದಿಂದ ಫೇಸ್ಬುಕ್ನಲ್ಲಿ ವಿವಾದಾತ್ಮಕ ಪೋಸ್ಟ್ ಶೇರ್ ಮಾಡಿದ್ದಾನೆ. ಈ ಬಗ್ಗೆ ನನಗೆ ಗೊತ್ತಿರಲಿಲ್ಲ. ತನಗೆ ಫೋನ್ ಬಳಸುವುದೂ ತಿಳಿದಿಲ್ಲ’ ಎಂದೂ ಕನ್ಹಯ್ಯ ದೂರಿನಲ್ಲಿ ಬರೆದಿದ್ದರು. ಆದರೆ, ಪೊಲೀಸರು ನಾಜಿಮ್ ಮತ್ತು ಕನ್ಹಯ್ಯ ನಡುವೆ ಮಧ್ಯಸ್ಥಿಕೆ ವಹಿಸಿ ವಿಚಾರವನ್ನು ಇತ್ಯರ್ಥಗೊಳಿಸಿದ್ದರೆಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಪ್ರಕಟಿಸಿದ್ದಕ್ಕಾಗಿ (ಮಂಗಳವಾರ) ಟೈಲರ್ ಕನ್ಹಯ್ಯ ಲಾಲ್ ಅವರ ಶಿರಚ್ಛೇದ ಮಾಡಲಾಗಿತ್ತು.</p>.<p><strong>ಇವನ್ನೂ ಓದಿ:</strong></p>.<p><strong><a href="https://www.prajavani.net/india-news/rajasthan-udaipur-tense-after-murder-protests-break-out-in-city-over-killing-of-hindu-man-internet-949664.html" itemprop="url" target="_blank">ರಾಜಸ್ಥಾನ: ಭೀಕರ ಹತ್ಯೆ ಬಳಿಕ ಭುಗಿಲೆದ್ದ ಪ್ರತಿಭಟನೆ, ಇಂಟರ್ನೆಟ್ ಸೇವೆ ಸ್ಥಗಿತ</a></strong></p>.<p><strong><a href="https://www.prajavani.net/india-news/rajasthan-udaipur-murder-case-tailor-killed-in-udaipur-over-social-posts-2-accused-arrested-949690.html" itemprop="url" target="_blank">ರಾಜಸ್ಥಾನ: ನೂಪುರ್ ಬೆಂಬಲಿಸಿ ಪೋಸ್ಟ್ ಮಾಡಿದ್ದ ವ್ಯಕ್ತಿಯ ಹತ್ಯೆ, ಇಬ್ಬರ ಬಂಧನ</a></strong></p>.<p><strong><a href="https://www.prajavani.net/india-news/rahul-gandhi-and-priyanka-gandhi-vadra-has-condemn-the-gruesome-murder-in-udaipur-rajasthan-949696.html" itemprop="url" target="_blank">ರಾಜಸ್ಥಾನ: ಉದಯಪುರ ಹತ್ಯೆಗೆ ಕಾಂಗ್ರೆಸ್ ನಾಯಕ ರಾಹುಲ್, ಪ್ರಿಯಾಂಕಾ ತೀವ್ರ ಖಂಡನೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>