<p><strong>ಜೈಪುರ</strong>: ನಗರದಲ್ಲಿರುವ ಆಶ್ರಮವೊಂದರಲ್ಲಿರುವ ಸ್ವಯಂ ಘೋಷಿತ ದೇವಮಾನವ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಮಹಿಳೆಯರು ಗುರುವಾರ ಆರೋಪಿಸಿದ್ದಾರೆ.</p>.<p>‘ತಪಸ್ವಿ ಆಶ್ರಮದ ಶೈಲೇಂದ್ರ ಮೆಹ್ತಾ ಎಂಬ ವ್ಯಕ್ತಿ ವಿರುದ್ಧ ನಾಲ್ವರು ಮಹಿಳೆಯರು ದೂರು ನೀಡಿದ್ದಾರೆ’ ಎಂದು ಭಂಕರೋಟಾ ಪೊಲೀಸ್ ಠಾಣೆ ಅಧಿಕಾರಿ ಮುಕೇಶ್ ಚೌಧರಿ ತಿಳಿಸಿದ್ದಾರೆ.</p>.<p>‘ಆಶ್ರಮದಲ್ಲಿ ಸತ್ಸಂಗ ಹಾಗೂ ಇತರ ಕಾರ್ಯಕ್ರಮಗಳು ನಡೆಯುತ್ತವೆ. ಇವುಗಳಲ್ಲಿ ಭಾಗಿಯಾಗಲು ಹಲವು ವರ್ಷಗಳಿಂದ ನಾವು ಆಶ್ರಮಕ್ಕೆ ಭೇಟಿ ನೀಡುತ್ತಿದ್ದೆವು. ಸೇವಾ ದೃಷ್ಟಿಯಿಂದ ಕೆಲವು ದಿನ ಕಾಲ ಆಶ್ರಮದಲ್ಲಿ ತಂಗುತ್ತಿದ್ದೆವು. ಈ ರೀತಿ ತಂಗಿದ್ದ ವೇಳೆಯಲ್ಲಿ ಮೆಹ್ತಾ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಚೌಧರಿ ಹೇಳಿದ್ದಾರೆ.</p>.<p>ಸಂತ್ರಸ್ತೆಯೊಬ್ಬರು ತಮ್ಮ ಮಗಳನ್ನು ಆಶ್ರಮಕ್ಕೆ ಕರೆದುಕೊಂಡು ಹೋಗದಂತೆ ಪತಿಗೆ ತಡೆದಾಗ ಈ ವಿಷಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.</p>.<p>ತನಿಖೆ ನಡೆಯುತ್ತಿದ್ದು, ಈ ವರೆಗೆ ಆರೋಪಿಯನ್ನು ಬಂಧಿಸಿಲ್ಲ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ನಗರದಲ್ಲಿರುವ ಆಶ್ರಮವೊಂದರಲ್ಲಿರುವ ಸ್ವಯಂ ಘೋಷಿತ ದೇವಮಾನವ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಮಹಿಳೆಯರು ಗುರುವಾರ ಆರೋಪಿಸಿದ್ದಾರೆ.</p>.<p>‘ತಪಸ್ವಿ ಆಶ್ರಮದ ಶೈಲೇಂದ್ರ ಮೆಹ್ತಾ ಎಂಬ ವ್ಯಕ್ತಿ ವಿರುದ್ಧ ನಾಲ್ವರು ಮಹಿಳೆಯರು ದೂರು ನೀಡಿದ್ದಾರೆ’ ಎಂದು ಭಂಕರೋಟಾ ಪೊಲೀಸ್ ಠಾಣೆ ಅಧಿಕಾರಿ ಮುಕೇಶ್ ಚೌಧರಿ ತಿಳಿಸಿದ್ದಾರೆ.</p>.<p>‘ಆಶ್ರಮದಲ್ಲಿ ಸತ್ಸಂಗ ಹಾಗೂ ಇತರ ಕಾರ್ಯಕ್ರಮಗಳು ನಡೆಯುತ್ತವೆ. ಇವುಗಳಲ್ಲಿ ಭಾಗಿಯಾಗಲು ಹಲವು ವರ್ಷಗಳಿಂದ ನಾವು ಆಶ್ರಮಕ್ಕೆ ಭೇಟಿ ನೀಡುತ್ತಿದ್ದೆವು. ಸೇವಾ ದೃಷ್ಟಿಯಿಂದ ಕೆಲವು ದಿನ ಕಾಲ ಆಶ್ರಮದಲ್ಲಿ ತಂಗುತ್ತಿದ್ದೆವು. ಈ ರೀತಿ ತಂಗಿದ್ದ ವೇಳೆಯಲ್ಲಿ ಮೆಹ್ತಾ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಚೌಧರಿ ಹೇಳಿದ್ದಾರೆ.</p>.<p>ಸಂತ್ರಸ್ತೆಯೊಬ್ಬರು ತಮ್ಮ ಮಗಳನ್ನು ಆಶ್ರಮಕ್ಕೆ ಕರೆದುಕೊಂಡು ಹೋಗದಂತೆ ಪತಿಗೆ ತಡೆದಾಗ ಈ ವಿಷಯ ಬೆಳಕಿಗೆ ಬಂದಿದೆ ಎನ್ನಲಾಗಿದೆ.</p>.<p>ತನಿಖೆ ನಡೆಯುತ್ತಿದ್ದು, ಈ ವರೆಗೆ ಆರೋಪಿಯನ್ನು ಬಂಧಿಸಿಲ್ಲ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>