ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಜೀವ್ ಚಂದ್ರಶೇಖರ್, ಈಚೆಗೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ನಾನು ಕಿಟೆಕ್ಸ್ ಗಾರ್ಮೆಂಟ್ಸ್ನ ವ್ಯವಸ್ಥಾಪಕ ನಿರ್ದೇಶಕ ಸಬು ಜಾಕೋಬ್ ಜೊತೆ ಚರ್ಚಿಸಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಆಹ್ವಾನಿಸಿದ್ದೇನೆ ಎಂದು ತಿಳಿಸಿದ್ದಾರೆ.