ಹೈದರಾಬಾದ್ನಲ್ಲಿ ಚಿತ್ರೀಕರಣಕ್ಕಾಗಿ ತೆರಳಿದ್ದ ರಜನಿಕಾಂತ್, ತೀವ್ರ ರಕ್ತದೊತ್ತಡ ಸಮಸ್ಯೆಯ ಹಿನ್ನೆಲೆಯಲ್ಲಿ ಡಿಸೆಂಬರ್ 25ರಂದು ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಿಂದ ಬಿಡುಗಡೆ ಬಳಿಕ ದಿಢೀರ್ ನಿರ್ಧಾರವನ್ನು ಬದಲಾಯಿಸಿ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದರು. ಅಲ್ಲದೆ ಇದು ದೇವರು ನೀಡಿದ ಎಚ್ಚರಿಕೆಯಾಗಿದೆ ಎಂದು ಉಲ್ಲೇಖಿಸಿದ್ದರು.