ಪತ್ರದಲ್ಲೇನಿದೆ: ತಮಗೆ ಆರೋಗ್ಯ ಸಮಸ್ಯೆ ಇದೆ. ಹಾಗಾಗಿ, ರಾಜಕೀಯ ಪ್ರವೇಶಿಸಲು ತಾವೇ ನಿಗದಿ ಮಾಡಿದ್ದ ಗಡುವನ್ನು ಪಾಲಿಸಲು ಆಗುತ್ತಿಲ್ಲ ಎಂದು ಆಪ್ತರಿಗೆ ರಜನಿಕಾಂತ್ ಬರೆದಿದ್ದಾರೆ ಎನ್ನಲಾದ ಪತ್ರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೋವಿಡ್ನಿಂದ ಅಪಾಯ ಸಂಭವಿಸಬಹುದಾದ ಸಾಧ್ಯತೆ ಇರುವುದರಿಂದ, ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂಬ ವಿವರವೂ ಪತ್ರದಲ್ಲಿದೆ.