ಕಡತವನ್ನು ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ ಎಂದು ಕೇಂದ್ರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ತಿಳಿಸಿದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ.ಆರ್. ಗವಾಯಿ ಅವರಿದ್ದ ಪೀಠವು, ಪೆರಾರಿವಾಲನ್ ವಿಚಾರದಲ್ಲಿ ತಮಿಳುನಾಡು ರಾಜ್ಯ ಮಂತ್ರಿ ಪರಿಷತ್ ಕೈಗೊಂಡ ನಿರ್ಣಯಕ್ಕೆ ರಾಜ್ಯಪಾಲರು ಬದ್ಧರಾಗಿರುತ್ತಾರೆ. ಆದರೆ, ಈ ವಿಚಾರದಲ್ಲಿ ರಾಜ್ಯಪಾಲರಿಗಿಂತ ಕೋರ್ಟ್ ನಿರ್ಧಾರವೇ ಮುಖ್ಯವಾಗುತ್ತದೆ. ಈ ವಿಚಾರ ಪರಿಶೀಲಿಸುತ್ತೇವೆ’ ಎಂದಿತು.