<p class="title"><strong>ನವದೆಹಲಿ</strong>: ರಷ್ಯಾ-ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ, ಭಾರತ ಎದುರಿಸಬಹುದಾದ ಪ್ರತಿಯೊಂದು ಸಂಭಾವ್ಯ ಭದ್ರತಾ ಸವಾಲನ್ನು ಮೆಟ್ಟಿನಿಲ್ಲಲು ಸಿದ್ಧರಿರುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನಾಧಿಕಾರಿಗಳಿಗೆ ಗುರುವಾರ ಹೇಳಿದರು.</p>.<p class="title">ಸೇನಾ ಕಮಾಂಡರ್ಗಳ ದ್ವೈವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಯಾವುದೇ ಸಂಭವನೀಯ ಪರಿಸ್ಥಿತಿಯನ್ನು ಎದುರಿಸಲು ಮತ್ತು ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಂಡಿರುವುದಕ್ಕೆ ರಕ್ಷಣಾ ಸಚಿವರು ಸೇನೆಯನ್ನು ಶ್ಲಾಘಿಸಿದರು.</p>.<p>ಸಮ್ಮೇಳನದಲ್ಲಿ ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸವಾಲುಗಳ ಕುರಿತು ವ್ಯಾಪಕ ವಿಮರ್ಶೆ ನಡೆಯಿತು. ರಷ್ಯಾ-ಉಕ್ರೇನ್ ಯುದ್ಧದ ಸಂಭವನೀಯ ರಾಜಕೀಯ ಪರಿಣಾಮಗಳ ಬಗ್ಗೆಯೂ ಚರ್ಚೆ ನಡೆಯಿತು.</p>.<p>ದೇಶದ ಭದ್ರತೆಗಾಗಿ ಸೇನೆಯ ನಿಸ್ವಾರ್ಥ ಸೇವೆ ಮತ್ತು ಸ್ವದೇಶೀಕರಣದ ಮೂಲಕ ಆಧುನೀಕರಣದ ಕಡೆಗೆ ಅದರ ಅವಿರತ ಪ್ರಯತ್ನಗಳ ಬಗ್ಗೆ ರಕ್ಷಣಾ ಸಚಿವರು ಶ್ಲಾಘಿಸಿದ್ದಾರೆ ಎಂದು ಸೇನೆ ಹೇಳಿದೆ. ಈ ಸಮ್ಮೇಳನವು ಶುಕ್ರವಾರ ಮುಕ್ತಾಯಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ರಷ್ಯಾ-ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ, ಭಾರತ ಎದುರಿಸಬಹುದಾದ ಪ್ರತಿಯೊಂದು ಸಂಭಾವ್ಯ ಭದ್ರತಾ ಸವಾಲನ್ನು ಮೆಟ್ಟಿನಿಲ್ಲಲು ಸಿದ್ಧರಿರುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನಾಧಿಕಾರಿಗಳಿಗೆ ಗುರುವಾರ ಹೇಳಿದರು.</p>.<p class="title">ಸೇನಾ ಕಮಾಂಡರ್ಗಳ ದ್ವೈವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಯಾವುದೇ ಸಂಭವನೀಯ ಪರಿಸ್ಥಿತಿಯನ್ನು ಎದುರಿಸಲು ಮತ್ತು ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಂಡಿರುವುದಕ್ಕೆ ರಕ್ಷಣಾ ಸಚಿವರು ಸೇನೆಯನ್ನು ಶ್ಲಾಘಿಸಿದರು.</p>.<p>ಸಮ್ಮೇಳನದಲ್ಲಿ ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಸವಾಲುಗಳ ಕುರಿತು ವ್ಯಾಪಕ ವಿಮರ್ಶೆ ನಡೆಯಿತು. ರಷ್ಯಾ-ಉಕ್ರೇನ್ ಯುದ್ಧದ ಸಂಭವನೀಯ ರಾಜಕೀಯ ಪರಿಣಾಮಗಳ ಬಗ್ಗೆಯೂ ಚರ್ಚೆ ನಡೆಯಿತು.</p>.<p>ದೇಶದ ಭದ್ರತೆಗಾಗಿ ಸೇನೆಯ ನಿಸ್ವಾರ್ಥ ಸೇವೆ ಮತ್ತು ಸ್ವದೇಶೀಕರಣದ ಮೂಲಕ ಆಧುನೀಕರಣದ ಕಡೆಗೆ ಅದರ ಅವಿರತ ಪ್ರಯತ್ನಗಳ ಬಗ್ಗೆ ರಕ್ಷಣಾ ಸಚಿವರು ಶ್ಲಾಘಿಸಿದ್ದಾರೆ ಎಂದು ಸೇನೆ ಹೇಳಿದೆ. ಈ ಸಮ್ಮೇಳನವು ಶುಕ್ರವಾರ ಮುಕ್ತಾಯಗೊಳ್ಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>