ಮೂಲಗಳ ಪ್ರಕಾರ, ಈ ಕುರಿತಂತೆ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ನಾಯಕರು ಮಹತ್ವದ ಸಭೆಯನ್ನು ನಡೆಸಿದ್ದಾರೆ. ಈ ಸಮಯದಲ್ಲಿ ಕಲಾಪದ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗಿದ್ದು, ನಂತರ ಖರ್ಗೆ ಅವರು ಪೆಗಾಸಸ್ ಬಗ್ಗೆ ಮೊದಲು ಚರ್ಚಿಸಬೇಕೆಂದು ರಾಜನಾಥ್ ಸಿಂಗ್ ಅವರಿಗೆ ತಿಳಿಸಿದ್ದಾರೆ. ಜೊತೆಗೆ, ಈ ಚರ್ಚೆ ವೇಳೆ, ಪ್ರಧಾನಿ ಅಥವಾ ಗೃಹ ಸಚಿವರು ಕಲಾಪದಲ್ಲಿ ಇರಬೇಕು ಎಂದು ತಿಳಿಸಿರುವುದಾಗಿ ತಿಳಿದುಬಂದಿದೆ.