<p><strong>ನವದೆಹಲಿ:</strong> ಪೂರ್ವ ಲಡಾಖ್ನಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ನಡುವೆ ಮಾಸ್ಕೊದಲ್ಲಿ ಇಂದು (ಶುಕ್ರವಾರ) ಸಂಜೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾದ ರಕ್ಷಣಾ ಸಚಿವ ವೀ ಫೆಂಗೆ ಅವರ ನಡುವೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಶಾಂಘೈ ಸಹಕಾರ ಸಂಸ್ಥೆಯ (ಎಸ್ಸಿಒ) ರಕ್ಷಣಾ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಉಭಯ ದೇಶಗಳ ರಕ್ಷಣಾ ಸಚಿವರು ಈಗಾಗಲೇ ಮಾಸ್ಕೊ ತಲುಪಿದ್ದಾರೆ. ಭಾರತದ ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಬೇಕೆಂದು ಚೀನಾದ ರಕ್ಷಣಾ ಸಚಿವರು ಮನವಿ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ.</p>.<p>ಮೇ ತಿಂಗಳ ಆರಂಭದಲ್ಲಿ ಪೂರ್ವ ಲಡಾಖ್ನಲ್ಲಿ ಗಡಿರೇಖೆ ಉಲ್ಬಣಗೊಂಡ ಉದ್ವಿಗ್ನ ಸ್ಥಿತಿ ನಂತರ ಇದು ಉಭಯ ದೇಶಗಳ ನಡುವಿನ ಮೊದಲ ಉನ್ನತ ಮಟ್ಟದ ಸಭೆಯಾಗಿದೆ. ಇದಕ್ಕೂ ಮುನ್ನ, ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಉಂಟಾದ ಬೆಳವಣಿಗೆಗಳ ಕುರಿತು ಚರ್ಚಿಸಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಸತತವಾಗಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೂರ್ವ ಲಡಾಖ್ನಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ನಡುವೆ ಮಾಸ್ಕೊದಲ್ಲಿ ಇಂದು (ಶುಕ್ರವಾರ) ಸಂಜೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾದ ರಕ್ಷಣಾ ಸಚಿವ ವೀ ಫೆಂಗೆ ಅವರ ನಡುವೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<p>ಶಾಂಘೈ ಸಹಕಾರ ಸಂಸ್ಥೆಯ (ಎಸ್ಸಿಒ) ರಕ್ಷಣಾ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಉಭಯ ದೇಶಗಳ ರಕ್ಷಣಾ ಸಚಿವರು ಈಗಾಗಲೇ ಮಾಸ್ಕೊ ತಲುಪಿದ್ದಾರೆ. ಭಾರತದ ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಬೇಕೆಂದು ಚೀನಾದ ರಕ್ಷಣಾ ಸಚಿವರು ಮನವಿ ಮಾಡಿದ್ದಾರೆಂದು ಮೂಲಗಳು ತಿಳಿಸಿವೆ.</p>.<p>ಮೇ ತಿಂಗಳ ಆರಂಭದಲ್ಲಿ ಪೂರ್ವ ಲಡಾಖ್ನಲ್ಲಿ ಗಡಿರೇಖೆ ಉಲ್ಬಣಗೊಂಡ ಉದ್ವಿಗ್ನ ಸ್ಥಿತಿ ನಂತರ ಇದು ಉಭಯ ದೇಶಗಳ ನಡುವಿನ ಮೊದಲ ಉನ್ನತ ಮಟ್ಟದ ಸಭೆಯಾಗಿದೆ. ಇದಕ್ಕೂ ಮುನ್ನ, ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿ ಉಂಟಾದ ಬೆಳವಣಿಗೆಗಳ ಕುರಿತು ಚರ್ಚಿಸಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರೊಂದಿಗೆ ಸತತವಾಗಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>