ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ್ಮಾರ್‌ ಹೆದ್ದಾರಿಯಲ್ಲಿ ಯುದ್ಧವಿಮಾನ ತುರ್ತು ಭೂಸ್ಪರ್ಶ ನೆಲೆ ಇಂದು ಉದ್ಘಾಟನೆ

Last Updated 9 ಸೆಪ್ಟೆಂಬರ್ 2021, 1:51 IST
ಅಕ್ಷರ ಗಾತ್ರ

ನವದೆಹಲಿ: ರಾಜಸ್ಥಾನದ ಬರ್ಮಾರ್‌ನ ಗಾಂಧವ್ ಭಕಾಸರ್ ವಿಭಾಗದ ರಾಷ್ಟ್ರೀಯ ಹೆದ್ದಾರಿ 925 ಎ ರಲ್ಲಿ ನಿರ್ಮಿಸಿರುವ ತುರ್ತು ವಿಮಾನ ಭೂಸ್ಪರ್ಶ ನೆಲೆಯನ್ನು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಗುರುವಾರ ಉದ್ಘಾಟಿಸಲಿದ್ದಾರೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) ಭಾರತೀಯ ವಾಯುಪಡೆಗೆ ತುರ್ತು ಭೂಸ್ಪರ್ಶದ ಸೌಲಭ್ಯಕ್ಕಾಗಿ (ಇಎಲ್‌ಎಫ್‌) 3 ಕಿ.ಮೀ ರಸ್ತೆ ಅಭಿವೃದ್ಧಿಪಡಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಭಾರತಮಾಲಾ ಪರಿಯೋಜನಾ ಅಡಿ ₹765.52 ಕೋಟಿ ವೆಚ್ಚದಲ್ಲಿ ಗಗರಿಯಾ-ಭಕಾಸರ್ ಮತ್ತು ಸತ್ತ-ಗಾಂಧವ್ ವಿಭಾಗದ ದ್ವಿಪಥದ ಒಟ್ಟು 196.97 ಕಿ.ಮೀ. ಉದ್ದನೆಯ ರಸ್ತೆಯನ್ನು ನಿರ್ಮಿಸಲಾಗಿದೆ. ಇಎಲ್‌ಎಫ್‌ ಸೌಲಭ್ಯ ಕೂಡ ಇದರ ಭಾಗವಾಗಿದೆ.

ವಾಯುಪಡೆ, ಸೇನೆಯ ಅಗತ್ಯಕ್ಕೆ ಕುಂದನಪುರ, ಸಿಂಘಾನಿಯಾ ಮತ್ತು ಭಕಾಸರ್ ಗ್ರಾಮಗಳಲ್ಲಿ 3 ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ. ದೇಶದ ಪಶ್ಚಿಮ ಭಾಗದ ಅಂತರರಾಷ್ಟ್ರೀಯ ಗಡಿಯಲ್ಲಿ ಭಾರತೀಯ ಸೇನೆ ಮತ್ತು ಭದ್ರತಾ ಜಾಲಕ್ಕೆ ಇದು ಬಲ ತುಂಬಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT